ಗ್ರಾಮೀಣ ವೈದ್ಯರಿಗೆ ಹೆಚ್ಚಿನ ಸಂಬಳ ನೀಡಲು ಕ್ರಮ
ಬೆಂಗಳೂರು, ಜು.2: ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರನ್ನು ಆಕರ್ಷಿಸಲು ಗುತ್ತಿಗೆ ಆಧಾರದ ಮೇಲೆ ನೇಮಕವಾಗುವ ವೈದ್ಯರಿಗೆ, ಖಾಯಂ ವೈದ್ಯರಿಗೆ ನೀಡಲಾಗುವ ವೇತನ ಶ್ರೇಣಿಯ ಕನಿಷ್ಠ ವೇತನವನ್ನು ನೀಡುವಂತೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಹುತೇಕ ವೈದ್ಯರುಗಳು ನಗರ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುತ್ತಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ವೈದ್ಯರಿಲ್ಲದೇ ಬಡವರಿಗೆ ತೊಂದರೆಯಾಗುತ್ತಿದೆ ಎಂದು ಮಧು ಬಂಗಾರಪ್ಪನವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಗುತ್ತಿಗೆ ಆಧಾರದಲ್ಲಿ ನೇಮಕವಾದ ವೈದ್ಯರಿಗೆ ಕನಿಷ್ಠ ವೇತನ ಹಾಗೂ ಅದಕ್ಕೆ ಕಾಲಕಾಲಕ್ಕೆ ಅನ್ವಯವಾಗುವ ಭತ್ಯೆ ಹಾಗೂ ಗ್ರಾಮೀಣ ಭತ್ಯೆ ಇತ್ಯಾದಿ ಪಾವತಿಸುವ ಕುರಿತಂತೆ ಸಮಾಲೋಚಿಸಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘದ ಬೇಡಿಕೆಯಂತೆ ಗ್ರಾಮೀಣ ಪ್ರದೇಶದಲ್ಲಿ 6 ವರ್ಷ, 6 ರಿಂದ 13 ವರ್ಷ, 13 ವರ್ಷಕ್ಕೂ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ಗ್ರಾಮೀಣ ಭತ್ಯೆ ಮತ್ತು ತುರ್ತು ಚಿಕಿತ್ಸಾ ಭತ್ಯೆಯನ್ನು ಅನುಕ್ರಮವಾಗಿ 16 ಸಾವಿರ ರೂ., 17 ಸಾವಿರ ರೂ. ಮತ್ತು 18 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. [ವಿದ್ಯುತ್ ಸಮಸ್ಯೆ ದೇವರಿಂದಲೂ ಬಗೆಹರಿಯೋಲ್ಲ!]
ವೈದ್ಯರ ವೇತನ ಪರಿಷ್ಕರಣೆ ಕುರಿತಂತೆ ಪರಿಶೀಲಿಸಲಾಗುತ್ತಿದ್ದು, ಈ ವೈದ್ಯರ ವೇತನ ಪರಿಷ್ಕರಣೆ ಕುರಿತಂತೆ ಸದಸ್ಯರ ಸಲಹೆಗಳನ್ನು ಪ್ರಸ್ತಾವನೆಯಲ್ಲಿ ಅಳವಡಿಸಿ, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications