ಹಲ್ಮಿಡಿಗೆ ಒಮ್ಮೆ ಹೋಗಿಬನ್ನಿ!
ಕನ್ನಡದ ಅತ್ಯಂತ ಹಳೆಯ ಬರವಣಿಗೆ ಅಂದ್ರೆ ಶಾಸನ ರೂಪದಲ್ಲಿರೋ ಹಲ್ಮಿಡಿ ಶಾಸನ. ಇದು ಕನ್ನಡದ ಹಳಮೆಯನ್ನು ದಾಖಲಿಸಿರೋ ಮೊಟ್ಟಮೊದಲ ಶಾಸನ. ಇದು ಸಿಕ್ಕಿದ ಜಾಗದ ಹೆಸರು ಹಲ್ಮಿಡಿ. ಹಾಗಾಗಿ ಇದನ್ನು ಹಲ್ಮಿಡಿ ಶಾಸನ ಅಂತಾನೆ ಕರೀತಾರೆ. ಈ ಶಾಸನವು ಕದಂಬರ ಕಾಲಕ್ಕೆ ಸೇರಿದ್ದು ಸುಮಾರು ಕ್ರಿ.ಶ.450ರ ಕಾಲದ್ದೆಂದು ಹೇಳಲಾಗಿದೆ. ಹದಿನಾರು ಸಾಲುಗಳ ಈ ಶಾಸನದಲ್ಲಿ ಪಲ್ಲವರ ವಿರುದ್ಧ ಯುದ್ಧಗಳನ್ನು ಗೆಲ್ಲಿಸಿಕೊಟ್ಟ ವಿಜಾ ಅರಸನೆಂಬ ಒಬ್ಬ ಯೋಧನಿಗೆ ನೀಡಲಾದ ಭೂಮಿ ಕಾಣಿಕೆಗಳ ಬಗ್ಗೆ ವಿವರ ಇದೆ.
ಹಲ್ಮಿಡಿ ಶಾಸನದಲ್ಲಿರೋದೇನು?
ಹಿಂದೆ ಕದಂಬ ದೊರೆ ಕಾಕುಸ್ಥ ವರ್ಮನ ಅಧಿಕಾರಿಗಳಾಗಿ ಬಲು ಶೂರರಾದ ನಾಗ ಮತ್ತು ಮೃಗೇಶ ಅನ್ನೋರಿದ್ರು. ಜೊತೆಗೆ ಪಶುಪತಿ ಅನ್ನೋ ಮತ್ತೊಬ್ಬನೂ ಇದ್ದ. ಬಾಣರು ಮತ್ತು ಸೇಂದ್ರಕರ ಸೈನ್ಯಗಳನ್ನು ಕೂಡಿಸಿಕೊಂಡು ಇವರು ನೂರಾರು ಯುದ್ಧಗಳನ್ನು ಕೇಕಯ ಪಲ್ಲವರೆದುರು ಮಾಡಿದ್ದರು. ಈ ಸೈನ್ಯದಲ್ಲಿದ್ದು ತನ್ನ ಪರಾಕ್ರಮದಿಂದ ಅನೇಕ ಯುದ್ಧಗಳನ್ನು ವಿಜಾ ಅರಸ ಎನ್ನುವ ಯೋಧನೊಬ್ಬ ಗೆಲ್ಲಿಸಿಕೊಟ್ಟಿದ್ದ. ಯುದ್ಧಗಳೆಲ್ಲಾ ಮುಗಿದ ಮೇಲೆ ರಕ್ತಸಿಕ್ತವಾದ ಖಡ್ಗವನ್ನು ತೊಳೆದು ಯೋಧರನ್ನು ಗೌರವಿಸೋದು ಆಗಿನ ಕಾಲದ ಒಂದು ಸಂಪ್ರದಾಯ. ಅದರಂತೆ ಬಾಣ ಮತ್ತು ಸೇಂದ್ರಕ ಸೈನ್ಯದ ಎದುರು ವಿಜಾ ಅರಸನನ್ನು ಗೌರವಿಸಿ ಸನ್ಮಾನ ಮಾಡಿ ಹಲ್ಮಿಡಿ ಮತ್ತು ಮುಗುಳವಳ್ಳಿ ಎಂಬ ಹಳ್ಳಿಗಳನ್ನು ದಾನ ಮಾಡಲಾಯಿತು. ಈ ದಾನ ಪತ್ರವೇ ಹಲ್ಮಿಡಿ ಶಾಸನವಾಗಿದೆ.
ಹೀಗೆ ಹೋಗಬೇಕು ಹಲ್ಮಿಡಿಗೆ!
ಮೂಲ ಶಾಸನವನ್ನು ಬೆಂಗಳೂರಿನಲ್ಲಿರುವ ಪುರಾತತ್ವ ಇಲಾಖೆಯ ವಸ್ತುಸಂಗ್ರಹಾಲಯದಲ್ಲಿ ಇಡಲಾಗಿದೆ. ಹಲ್ಮಿಡಿಯಲ್ಲಿ ಸ್ಮಾರಕ ನಿಲ್ಲಿಸಲಾಗಿದೆ. ಬೇಲೂರು ಹಳೆಬೀಡುಗಳನ್ನು ನೋಡಲು ಹೋಗೋರು ಬೇಲೂರಿನಿಂದ ಚಿಕ್ಕಮಗಳೂರಿನ ಕಡೆ ಹೋಗಬೇಕು. ದಾರಿಯಲ್ಲಿ ಹನ್ನೆರಡು ಕಿಲೋಮೀಟರ್ ಸಾಗಿದ ನಂತರ ಕೋಡನಹಳ್ಳಿ ಅಂತಾ ಸಿಗುತ್ತೆ. ಅಲ್ಲೇ ಹತ್ತಿರದಲ್ಲಿ ಚನ್ನಾಪುರ ಕ್ರಾಸ್ ಸಿಗುತ್ತೆ. ಅಲ್ಲಿಂದ ಎಡಕ್ಕೆ ತಿರುಗಿ ಆರು ಕಿಲೋಮೀಟರ್ ಹೋದರೆ ಅಲ್ಲಿದೆ ಹಲ್ಮಿಡಿ. ಇದನ್ನು ಹನುಮಿಡಿ ಅಂತಲೂ ಅಂತಾರೆ. ಅಲ್ಲಿಗೆ ಹೋಗೋ ದಾರಿ ಚನ್ನಾಪುರದ ತನಕ ಹೆದ್ದಾರಿಯಾಗಿದ್ದು ನುಣುಪಾಗಿ ಚೆನ್ನಾಗಿದೆ. ಒಳಗಿನ ಆರು ಕಿ.ಮೀ ಮಾತ್ರ ಸ್ವಲ್ಪ ತರಿ ತರಿಯಾಗಿದೆ. ಮುಂದಿನ ಸಾರಿ ಬೇಲೂರಿಗೆ ಹೋಗೋವಾಗ ತಪ್ಪದೇ ಹಲ್ಮಿಡಿಗೆ ಹೋಗಿಬನ್ನಿ. ಅಲ್ಲಿಗೆ ಹೆಚ್ಚು ಹೆಚ್ಚು ಪ್ರವಾಸಿಗರು ಹೋಗಿ ಬರ್ತಾ ಇದ್ರೆ, ಸರ್ಕಾರ ಪ್ರವಾಸಿ ಕೇಂದ್ರವನ್ನಾಗಿಯೂ ಅದನ್ನು ಬೆಳಸಕ್ಕೆ ಮುಂದಾಗುತ್ತೆ. ಅದೆಲ್ಲಕ್ಕಿಂತ ಹೆಚ್ಚಾಗಿ "ಕನ್ನಡದ ಮೊಟ್ಟಮೊದಲ ಶಾಸನ ಸಿಕ್ಕ ಜಾಗ" ನಮಗೆಲ್ಲ ಸ್ಪೂರ್ತಿ ಕೊಡೋದ್ರಲ್ಲಿ ಸಂದೇಹಾನೆ ಇಲ್ಲಾ ಗುರು.
(ಸ್ನೇಹಸೇತು : ಏನ್ಗುರು?)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications