ರೈಲು ನಿಲ್ದಾಣಗಳನ್ನು ಪರಿಶೀಲಿಸಿದ ಸದಾನಂದ ಗೌಡರು
ಬೆಂಗಳೂರು, ಜು.13 : ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಅವರು ಭಾನುವಾರ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪ್ರಯಾಣಿಕರ ಕುಂದು-ಕೊರತೆ ವಿಚಾರಿಸಿದರು. ಸ್ವಚ್ಛತೆಗೆ ಆದ್ಯತೆ ನೀಡಬೇಕು, ಭದ್ರತೆ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಭಾನುವಾರ ಬೆಳಗ್ಗೆ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸದಾನಂದ ಗೌಡರು, ರೈಲ್ವೆ ನಿಲ್ದಾಣದ ಸಮಸ್ಯೆಗಳು ಮತ್ತು ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಆನಂತರ ನಗರ ಕೇಂದ್ರ ರೈಲು ನಿಲ್ದಾಣಕ್ಕೆ ಆಗಮಿಸಿ ಪ್ಲಾಟ್ ಫಾರಂಗಳು, ಶೌಚಾಲಯ ಮತ್ತು ನಿಲ್ದಾಣಗಳ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. [ಗೌಡ್ರು ಬಿಡಲಿರುವ ಬುಲೆಟ್ ರೈಲಿನ ವಿಶೇಷತೆಗಳು!]
ನಂತರ ರೈಲಿನಲ್ಲಿ ಅವರು ಮೈಸೂರಿಗೆ ತೆರಳಿದರು. ಮಾರ್ಗ ಮಧ್ಯದಲ್ಲಿ ಚನ್ನಪಟ್ಟಣ, ಮಂಡ್ಯ ರೈಲು ನಿಲ್ದಾಣಗಳಿಗೂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಸದಾನಂದ ಗೌಡರನ್ನು ಬರಮಾಡಿಕೊಂಡರು. ಮೈಸೂರಿನಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಚಿತ್ರಗಳಲ್ಲಿ ನೋಡಿ ಸದಾನಂದ ಗೌಡರ ಭೇಟಿ

ಬೆಂಗಳೂರು ನಿಲ್ದಾಣಕ್ಕೆ ಭೇಟಿ
ಬೆಂಗಳೂರು ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಸದಾನಂದ ಗೌಡರು, ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ನಿಲ್ದಾಣದ ಕ್ಯಾಂಟೀನ್ ಗೆ ಭೇಟಿ ನೀಡಿ ಊಟ-ತಿಂಡಿ ವ್ಯವಸ್ಥೆ ಹೇಗಿದೆ ಎಂದು ಜನರನ್ನು ಪ್ರಶ್ನಿಸಿ ಮಾಹಿತಿ ಪಡೆದರು.

ಪ್ರಯಾಣಿಕರಿಗೆ ತೊಂದರೆ ಮಾಡಬೇಡಿ
ಪ್ರಯಾಣಿಕರಿಗೆ ಹೆಚ್ಚು ಹೆಚ್ಚು ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸದಾನಂದ ಗೌಡರು, ಪ್ರಯಾಣಿಕರು ಗಂಟೆಗಟ್ಟಲೆ ಕ್ಯೂ ನಿಲ್ಲುವಂತೆ ಮಾಡಬಾರದು. ಅಗತ್ಯಬಿದ್ದರೆ ಹೆಚ್ಚುವರಿ ಟಿಕೆಟ್ ವಿತರಣಾ ಕೌಂಟರ್ಗಳನ್ನು ತೆರೆಯಬೇಕು. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಹೇಳಿದರು.

ಮೈಸೂರಿಗೆ ಭೇಟಿ
ನಂತರ ಮೈಸೂರಿಗೆ ರೈಲಿನಲ್ಲಿ ತೆರಳಿದ ಸದಾನಂದ ಗೌಡರು, ಮಂಡ್ಯ, ಚನ್ನಪಟ್ಟಣದಲ್ಲಿಯೂ ನಿಲ್ದಾಣಗಳಿಗೆ ಭೇಟಿ ನೀಡಿದರು. ಮೈಸೂರು-ಬೆಂಗಳೂರು ಜೋಡಿ ಮಾರ್ಗವನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
ಮೈಸೂರಿನ ವಿಭಾಗೀಯ ಮಟ್ಟದ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸದಾನಂದ ಗೌಡರು, ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಹೈ ಸ್ಪೀಡ್ ರೈಲು ಆರಂಭಿಸಲು ಬಜೆಟ್ ನಲ್ಲಿ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಯಾವ ರೀತಿ ಕೆಲಸ-ಕಾರ್ಯಗಳು ಆಗಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಸಹ ಉಪಸ್ಥಿತರಿದ್ದರು.

ಬಿಜೆಪಿ ಕಚೇರಿಗೆ ಭೇಟಿ
ಮೈಸೂರಿನ ಬಿಜೆಪಿ ಕಚೇರಿಗೂ ಭೇಟಿ ನೀಡಿದ್ದ ಸದಾನಂದ ಗೌಡರು ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
-
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications