ಎಟಿಎಂ ದರೋಡೆ, ಸಾವು ಬದುಕಿನ ನಡುವೆ ಗಾರ್ಡ್
ಬೆಂಗಳೂರು, ಜು.12: ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಮತ್ತೊಮ್ಮೆ ಹಲ್ಲೆ ನಡೆದಿದೆ. ದುಷ್ಕರ್ಮಿಗಳ ಗುಂಪೊಂದು ಶುಕ್ರವಾರ ತಡರಾತ್ರಿ ನಡೆಸಿದ ಎಟಿಎಂ ಕಳುವು ಯತ್ನ ವಿಫಲಗೊಂಡಿದೆ. ದುಷ್ಕರ್ಮಿಗಳನ್ನು ತಡೆಯುವ ಯತ್ನದಲ್ಲಿ ಹಲ್ಲೆಗೊಳ್ಳಲಾದ ಸೆಕ್ಯುರಿಟಿ ಗಾರ್ಡ್ ಈಗ ಜೀವನ್ಮರಣ ಹೋರಾಟ ನಡೆಸಿದ್ದಾನೆ.
ನಗರದ ಎಚ್.ಎಸ್.ಆರ್ ಲೇಔಟ್ ನಲ್ಲಿರುವ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಲಗ್ಗೆ ಇಟ್ಟ ದುಷ್ಕರ್ಮಿಗಳ ಗುಂಪು ಹಾರೆ ಮೂಲಕ ಎಟಿಎಂ ಕೇಂದ್ರದ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸೆಕ್ಯುರಿಟಿ ಗಾರ್ಡ್ ಷಂಶುಲ್ ದುಷ್ಕರ್ಮಿಗಳಿಗೆ ತಡೆಯೊಡ್ಡಿದ್ದಾರೆ.
ಸೆಕ್ಯುರಿಟಿ ಗಾರ್ಡ್ ಮೇಲೆ ಹಾರೆಯಿಂದ ಹಲ್ಲೆ ಮಾಡಿದ್ದಾರೆ. ನಂತರ ದುಷ್ಕರ್ಮಿಗಳ ತಂಡ ಎಟಿಎಂ ಒಡೆಯಲು ಯತ್ನಿಸಿ ವಿಫಲವಾಗಿದೆ. ಹಲ್ಲೆಗೊಳಗಾಗಿ ನೋವಿನಿಂದ ಚೀರುತ್ತಿದ್ದ ಸೆಕ್ಯುರಿಟಿ ಗಾರ್ಡ್ ಮೇಲೆ ಮತ್ತೊಮ್ಮೆ ಹಾರೆಯಿಂದ ಹೊಡೆದು ಅಲ್ಲಿಂದ ತಂಡ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಇನ್ನೂ ವಿವರಗಳು ತಿಳಿದು ಬಂದಿಲ್ಲ, ಷಂಶುಲ್ ಅವರು ಎಟಿಎಂ ಕಳುವು ಯತ್ನವನ್ನು ತಪ್ಪಿಸಲು ಹೋರಾಟ ನಡೆಸಿ ತೀವ್ರವಾಗಿ ಹಲ್ಲೆಗೊಳಗಾಗಿದ್ದಾರೆ. ಸದ್ಯ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಚ್ಎಸ್ ಆರ್ ಪೊಲೀಸ್ ಠಾಣಾಧಿಕಾರಿ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಆಗ್ನೇಯ ವಲಯದ ಡಿಸಿಪಿ ಟಿಡಿ ಪವಾರ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಜ್ಯೋತಿ ಯಾದವ್ ಹಲ್ಲೆ ಪ್ರಕರಣ: ನಗರ ಜೆ.ಸಿ.ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಹಲ್ಲೆಗೊಳಗಾಗಿದ್ದ ಜ್ಯೋತಿ ಉದಯ್ ಈಗ ಆರೋಗ್ಯವಾಗಿದ್ದು, ಬ್ಯಾಂಕ್ ಉದ್ಯೋಗಕ್ಕೆ ಎಂದಿನಂತೆ ಹಾಜರಾಗುತ್ತಿದ್ದಾರೆ. ಆದರೆ, ಜ್ಯೋತಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿ ಮಾತ್ರ ಇನ್ನೂ ಪತ್ತೆಯಾಗಿಲ್ಲ.
ಕಳೆದ ನವೆಂಬರ್ 19 ರಂದು ಬೆಳಗ್ಗೆ 7.15 ರ ಸುಮಾರಿಗೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪುನಃ ನವೀಕರಿಸಲಾಗಿದೆ. 10 ಸಬ್ ಇನ್ಸ್ ಪೆಕ್ಟರ್, 8 ಇನ್ಸ್ ಪೆಕ್ಟರ್ ಹಾಗೂ ಸೈಬರ್ ತಜ್ಞರುಳ್ಳ ವಿಶೇಷ ತಂಡವೊಂದನ್ನು ರಚಿಸಲಾಗಿದೆ.
ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ ಹಾಗೂ ಆಂಧ್ರಪ್ರದೇಶ ಗಡಿ ಭಾಗದಲ್ಲಿ ಹಲ್ಲೆಕೋರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಬೆಂಗಳೂರು ನಗರ ಪೊಲೀಸರು ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications