ಬಾಗಲಕೋಟೆ ಕೋರ್ಟ್ನಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ
ಬಾಗಲಕೋಟೆ, ಸೆಪ್ಟೆಂಬರ್ 12 : ಬಾಗಲಕೋಟೆ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 3/10/2016 ಕೊನೆಯ ದಿನವಾಗಿದೆ.
ಶ್ರೀಘ್ರಲಿಪಿಗಾರ,
ಬೆರಳಚ್ಚುಗಾರ,
ಆದೇಶ
ಜಾರಿಕಾರ
ಮತ್ತು
ಸಿಪಾಯಿ
ಹುದ್ದೆಗಳನ್ನು
ಭರ್ತಿ
ಮಾಡಲು
ಅರ್ಜಿ
ಆಹ್ವಾನಿಸಲಾಗಿದೆ.
ವೆಬ್ಸೈಟ್ನಲ್ಲಿ
ಇರುವ
ನಿಗದಿತ
ಅರ್ಜಿ
ನಮೂನೆ
ಮೂಲಕ
ಮಾತ್ರ
ಅರ್ಜಿಗಳನ್ನು
ಸಲ್ಲಿಸಬಹುದಾಗಿದೆ.
ಶ್ರೀಘ್ರಲಿಪಿಗಾರ 11, ಬೆರಳಚ್ಚುಗಾರ 8, ಆದೇಶ ಜಾರಿಕಾರ 4 ಮತ್ತು ಸಿಪಾಯಿ 8 ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 3/10/2016 ಸಂಜೆ 5 ಗಂಟೆ.[ಅರ್ಜಿ ನಮೂನೆಗಾಗಿ ಕ್ಲಿಕ್ ಮಾಡಿ]
ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕೆಳಕಂಡ ವಯೋಮಿತಿಯನ್ನು ಹೊಂದಿರತಕ್ಕದ್ದು. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷ/ಪ್ರವರ್ಗ 2ಎ/2ಬಿ/3ಎ/3ಬಿ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬಾಗಲಕೋಟೆ ಇವರ ವಿಳಾಸಕ್ಕೆ ಕಳಿಸಬೇಕು.
ಉದ್ಯೋಗದ ಮಾಹಿತಿ
* ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ ಗ್ರೇಡ್-1 ವೃ೦ದದ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/10/2016. 815 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು 809 ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುತ್ತದೆ. [ವಿವರಗಳು ಇಲ್ಲವೆ]
* ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. [ವಿವರ ಇಲ್ಲಿದೆ]