ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಾಮೀಜಿ, ಸಿದ್ದರಾಮಯ್ಯ ಯಾರಾದರೂ ನನ್ನ ಸೋಲಿಸಲಾಗಲ್ಲ: ಸವದಿ ಸವಾಲು

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಅಥಣಿ (ಬೆಳಗಾವಿ), ಜನವರಿ 20 : ಮುಖ್ಯಮಂತ್ರಿ ಸಿದ್ದರಾಮಯ್ಯ ನಿಲ್ಲಲಿ, ಮೊಟಗಿ ಮಠದ ಸ್ವಾಮೀಜಿಯೇ ನಿಲ್ಲಲಿ. ಯಾರಿಂದಲೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಶನಿವಾರ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎನ್ನಲಾದ ಮೊಟಗಿ ಮಠದ ಸ್ವಾಮೀಜಿಗೆ ಟಾಂಗ್ ನೀಡಿದ್ದಾರೆ.

ನಮ್ಮನ್ನು ಇನ್ನೂ ಪರೀಕ್ಷಿಸಬೇಡಿ: ಬಿ.ಎಸ್.ಯಡಿಯೂರಪ್ಪನಮ್ಮನ್ನು ಇನ್ನೂ ಪರೀಕ್ಷಿಸಬೇಡಿ: ಬಿ.ಎಸ್.ಯಡಿಯೂರಪ್ಪ

ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ವೈಯಕ್ತಿಕ ವರ್ಚಸ್ಸು ಹಾಗೂ ನಾನು ಮಾಡಿದ ಕೆಲಸಗಳು ಶ್ರೀರಕ್ಷೆ ಆಗಿವೆ. ಕಾಂಗ್ರೆಸ್ ಮುಖಂಡರ ತುತ್ತೂರಿ ಯಾರ ಕಿವಿಗೂ ತಲುಪದು ಎಂದು ಅವರು ವ್ಯಂಗ್ಯವಾಡಿದ್ದಾರೆ. ಒಂದು ವೇಳೆ ಸ್ವಾಮೀಜಿ ರಾಜಕಾರಣ ಮಾಡಬೇಕು ಎಂದಿದ್ದರೆ ಮಠ ಬಿಟ್ಟು ಹೊರ ಗೆಬರಲಿ ಎಂದು ಲಕ್ಷ್ಮಣ ಸವದಿ ಅವರು ಹೇಳಿದರು.

Lakshman Savadi

ನಾನು ಜಾತಿ ಆಧಾರದಲ್ಲಿ ಎಂದೂ ರಾಜಕಾರಣ ಮಾಡಿದವನಲ್ಲ ಎಂದ ಅವರು, ನಾನು ಕ್ಷೇತ್ರಕ್ಕಾಗಿ ಮಾಡಿದ ಕೆಲಸದಿಂದ ಜನರು ನನಗೆ ಆಶೀರ್ವಾದ ಮಾಡಲಿದ್ದಾರೆ. ಆದ್ದರಿಂದ ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

English summary
Siddaramaiah or Motagi mutt seer cannot defeat me in up coming assembly elections, says MLA Lakshman Savadi in Athani, Belagavi on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X