ಸೃಜನಶೀಲ ಕವಿ ಪುತಿನ ಜನ್ಮಶತಾಬ್ದಿ
- ಖಾದ್ರಿ ಎಸ್. ಅಚ್ಯುತನ್, ಬೆಂಗಳೂರು
ಕಾವ್ಯ, ಲಲಿತಪ್ರಬಂಧ, ವ್ಯಕ್ತಿಚಿತ್ರಗಳು, ಗೀತರೂಪಕ ಹಾಗೂ ಕಾವ್ಯ ಮೀಮಾಂಸೆಗಳಿಗೆ ಇವರು ನೀಡಿದ ಕೊಡುಗೆ ಅಪಾರ. ಅವರ ಗೋಕುಲ ನಿರ್ಗಮನ ಹಾಗೂ ಇತರ ಗೀತರೂಪಕಗಳು ಹಲವಾರು ರಂಗ ಪ್ರಯೋಗಗಳನ್ನು ಕಂಡಿವೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಫೆಲೋಶಿಪ್ ಇವರನ್ನು ಹುಡುಕಿಕೊಂಡು ಬಂದರೆ, ಚಿಕ್ಕಮಗಳೂರಿನಲ್ಲಿ ನಡೆದ 53ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವ ಪುತಿನ ಅವರದಾಗಿತ್ತು.
ಬದುಕಿನ ಕೊನೆ ಘಳಿಗೆಯವರೆಗೂ ಕೃತಿಗಳನ್ನು ರಚಿಸಿಕೊಂಡು ಬಂದ ಇವರು 1998ರ ಅಕ್ಟೋಬರ್ 13ರಂದು ಅಸ್ತಂಗತರಾದಾಗ ಕನ್ನಡ ಸಾರಸ್ವತ ಲೋಕದಲ್ಲಿ ದೊಡ್ಡ ಶೂನ್ಯವೇ ಸೃಷ್ಟಿಯಾದಂತಿತ್ತು. ಅವರ ಜೀವಿತ ಕಾಲದಲ್ಲೇ ಕರ್ನಾಟಕ ಸರಕಾರ ಪುತಿನ ಹೆಸರಿನ ಟ್ರಸ್ಟ್ ಸ್ಥಾಪಿಸಿತ್ತು.
ಮೈಸೂರಿನ ಪ್ರಾಚ್ಯವಸ್ತು ಸಂಶೋಧನೆ ಇಲಾಖೆಯ ನೆರವಿನಿಂದ ಮೇಲುಕೋಟೆಯಲ್ಲಿ ಪುತಿನ ಅವರ ಮನೆಯನ್ನು ಪುನರುಜ್ಜೀವನಗೊಳಿಸಿ ಅದನ್ನು ಸಾಂಸ್ಕೃತಿಕ ಸಂಸ್ಮರಣೆ ಕೇಂದ್ರವನ್ನಾಗಿಸಿದೆ. ಪುತಿನ ಅವರ ಅಪ್ರಕಟಿತ ರಸಪ್ರಕಾಶ ದ ಸಮಗ್ರ ಗದ್ಯ ಸಂಪುಟವನ್ನು 2002ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಪ್ರಕಟಿಸಿದೆ.
ಕನ್ನಡದ ಅತ್ಯುತ್ತಮ ಕಾವ್ಯ ಅಥವಾ ನಾಟಕ ಕೃತಿಗಳಿಗೆ ಪ್ರತಿ ವರ್ಷ ಪುತಿನ ಟ್ರಸ್ಟ್ 10 ಸಾವಿರ ರೂ. ಬಹುಮಾನ ನೀಡುತ್ತಿದೆ. ಪುತಿನ ಅವರಿಗೆ ಪ್ರಿಯವಾದ ಕಾವ್ಯ ಮೀಮಾಂಸೆಯನ್ನು ಅಧ್ಯಯನದ ವಿಷಯವನ್ನಾಗಿ ಆಯ್ದು ಅತಿ ಹೆಚ್ಚು ಅಂಕ ಪಡೆಯುವ ಮೈಸೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈ ಕವಿಯ ಹೆಸರಿನಲ್ಲಿ ಚಿನ್ನದ ಪದಕವನ್ನು ಪ್ರತಿ ವರ್ಷವೂ ನೀಡುವ ವ್ಯವಸ್ಥೆಯನ್ನು ಈ ಟ್ರಸ್ಟ್ ಮಾಡಿದೆ.
(ಸ್ನೇಹ ಸೇತು : ವಿಜಯ ಕರ್ನಾಟಕ)
ಪೂರಕ ಓದಿಗೆ :
ಗೋಕುಲ ನಿರ್ಗಮನ - ಒಂದೆ ಬಾರಿ ನುಡಿಸು ಕೃಷ್ಣ ಅಭಯಗೀತವ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications