ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?

By Staff
|
Google Oneindia Kannada News

ಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ.

ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ ನಡೆಯಿತು. ಇದೀಗ ಹೊಸದಾಗಿ ಅಂಬರೀಷ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸರ್ವ ಪ್ರಯತ್ನಗಳು ನಡೆಯುತ್ತಿವೆ.

ಈ ಸಂಬಂಧ ಬಿಜೆಪಿ ನಾಯಕರು ಅಂಬರೀಷ್ ಅವರೊಂದಿಗೆ ಈಗಾಗಲೇ ಮಾತುಕತೆಯನ್ನು ನಡೆಸಿದ್ದಾರೆ.ಮಾರ್ಚ್ 14ರ ಚುನಾವಣಾ ಸಮಿತಿ ಸಭೆ ವೇಳೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X