ಜಗನ್ ಕೇಸ್ : ಬಿಸಿಸಿಐ ಶ್ರೀನಿವಾಸನ್ ಗೆ ಸಿಬಿಐ ಸಮನ್ಸ್

ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಂಸ್ಥೆಗಳಲ್ಲಿ ಬಂಡವಾಳ ಹೂಡಿಕೆ ಮಾಡಿರುವ ಉದ್ಯಮಿಗಳ ಮೇಲೆ ಸಿಬಿಐ ಕಣ್ಣಿರಿಸಿದೆ. ಶ್ರೀನಿವಾಸನ್ ಅವರು ಜಗನ್ ಅವರ ಸಿಮೆಂಟ್ ಕಂಪನಿಯಲ್ಲಿ ತೊಡಗಿಸಿರುವ ಬಂಡವಾಳದ ಬಗ್ಗೆ ಸಿಬಿಐ ಪ್ರಶ್ನಿಸಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐಟಿ ಸಚಿವ ಪೊನ್ನಲಾ ಲಕ್ಷ್ಮಯ್ಯ ಅವರನ್ನು ಸಿಬಿಐ ಪ್ರಶ್ನಿಸಿದೆ. ವೈಎಸ್ ರಾಜಶೇಖರ ರೆಡ್ಡಿ ಅವರ ಅಧಿಕಾರವಿದ್ದ ಕಾಲದಲ್ಲಿ 2004-2009 ಸರ್ಕಾರಿ ಆದೇಶ ಹೊರಡಿಸಿದ ತಪ್ಪಿಗೆ ಲಕ್ಷ್ಮಯ್ಯ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ರಾಜಶೇಖರ್ ರೆಡ್ಡಿ ಕಾಲದಲ್ಲಿ ನೀರಾವರಿ ಸಚಿವರಾಗಿದ್ದ ಲಕ್ಷ್ಮಯ್ಯ ಅವರು ಸಿಮೆಂಟ್ ಕಂಪನಿಗಳಿಗೆ ಅಕ್ರಮವಾಗಿ ನೀರು ಸರಬರಾಜು ಮಾಡಿದ ಆರೋಪ ಹೊತ್ತಿದ್ದಾರೆ.
ಜಗನ್ ಮೋಹನ್ ರೆಡ್ಡಿ ಅಲ್ಲದೆ ಜಗನ್ ಅವರ ಆರ್ಥಿಕ ಸಲಹೆಗಾರ ವಿ ವಿಜಯ್ ಸಾಯಿ ರೆಡ್ಡಿ, ಮಾಜಿ ಆಂಧ್ರ ಸಚಿವ ಮೋಪಿದೇವಿ ವೆಂಕಟರಮಣ ರಾವ್, ಉದ್ಯಮಿ ನಿಮ್ಮಗಡ್ಡ ಪ್ರಸಾದ್ ಹಾಗೂ ಸರ್ಕಾರಿ ಅಧಿಕಾರಿ ಕೆವಿ ಬ್ರಹ್ಮಾನಂದ ರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಈ ನಡುವೆ ಜಗನ್ ಮೋಹನ್ ರೆಡ್ಡಿ ಅವರ ನ್ಯಾಯಾಂಗ ಬಂಧನ ಅವಧಿ ಜೂ.11ರ ತನಕ ಇರುವುದರಿಂದ ಜಗನ್ ಚಂಚಲಗುಡ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಐದು ದಿನಗಳ ಕಾಲ ಸಿಬಿಐ ವಶದಲ್ಲಿದ್ದ ಜಗನ್ ಅವರಿಗೆ ಗುರುವಾರ ಮುಕ್ತಿ ಸಿಕ್ಕಿತ್ತು. ಆದರೆ, ಇನ್ನೂ ಮೂರು ದಿನಗಳ ಕಾಲ ವಿಚಾರಣೆಗೆ ಜಗನ್ ಅವರನ್ನು ಒದಗಿಸುವಂತೆ ಸಿಬಿಐ ತಂಡ ಕೋರ್ಟಿನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications