ಖಾತ್ರಿ ಕಾರ್ಮಿಕರ ಕೈಗೆ ಉಚಿತ ಮೊಬೈಲ್!

ಈಗಾಗಲೇ ಈ ಕುರಿತು ಪ್ರಸ್ತಾವನೆ ರಚಿಸಲಾಗಿದೆ. ಕೇಂದ್ರ ಸರ್ಕಾರ ಅಂದುಕೊಂಡಂತೆ ಎಲ್ಲವೂ ನಡೆದರೆ, ಕೆಲವು ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳು ಮೊಬೈಲ್ ಹಿಡಿದು ಹಲೋ ಎನ್ನಲಿದ್ದಾರೆ.
'ಭಾರತ್ ಮೊಬೈಲ್ ಯೋಜನೆ' ಎಂದು ಈ ಯೋಜನೆಗೆ ಹೆಸರಿಡಲಾಗಿದ್ದು, ಯೋಜನೆ ಅನ್ವಯ ಕುಟುಂಬವೊಂದರಲ್ಲಿ 100 ದಿನ ಉದ್ಯೋಗ ಪೂರೈಸಿದ ಒಬ್ಬ ವ್ಯಕ್ತಿಗೆ ಕೇಂದ್ರ ಸರ್ಕಾರ ಉಚಿತವಾಗಿ ಮೊಬೈಲ್ ವಿತರಿಸಲಿದೆ.
ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿ ಮೊಬೈಲ್ ಹಂಚಲು ಕೇಂದ್ರ ನಿರ್ಧರಿಸಿದೆ. ಈ ಮೊಬೈಲ್ಗಳು ಮೂರು ವರ್ಷಗಳ ವಾರಂಟಿ ಹೊಂದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರ್ಗಾಯಿಸುವಂತಿಲ್ಲ : ಈ ಮೊಬೈಲ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾವಣೆ ಮಾಡುವಂತಿಲ್ಲ. ಮೊಬೈಲ್ ನಂಬರ್ ಅನ್ನು ಕೇಂದ್ರ ಸರ್ಕಾರದ ನೇರ ಸಬ್ಸಿಡಿ ಯೋಜನೆಗೆ ಅಳವಡಿಸಿರುತ್ತದೆ.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಮೊಬೈಲ್ಗೆ ರವಾನಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆ ದೊರೆತರೆ, ಕೆಲವು ದಿನಗಳಲ್ಲಿ ಉದ್ಯೋಗ ಖಾತ್ರಿ ಜನರ ಕೈಯಲ್ಲಿ ಮೊಬೈಲ್ ಇರುವುದು ಖಾತ್ರಿಯಾಗಿದೆ.
ಈ ಯೋಜನೆ ಮಾತು ಕತೆಯ ಹಂತದಲ್ಲಿದ್ದು, ಯೋಜನೆಯ ರೂಪುರೇಷೆ ಇನ್ನಷ್ಟೇ ಅಂತಿಗೊಳ್ಳಬೇಕುಎಂದು ಅಧಿಕಾರಿಗಳು ಹೇಳಿದ್ದಾರೆ. ಜಿಲ್ಲಾಡಳಿತದ ಸಹಾಯದಿಂದ ಟೆಲಿಕಾಂ ಕಂಪನಿಗಳು ಮೊಬೈಲ್ಗಳನ್ನು ವಿತರಿಸಲಿವೆ ಎಂಬುದು ಸದ್ಯದ ಮಾಹಿತಿ.
ಹಗರಣಗಳ ಕರಿನೆರಳನ್ನು ಮೀರಿ ಕಾಂಗ್ರೆಸ್ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಿ ಪಡೆಯಬೇಕೆಂದು ರಣತಂತ್ರ ರೂಪಿಸಿದೆ. ಆದ್ದರಿಂದ ಗ್ರಾಮೀಣ ಭಾಗದ ಜನರಿಗೆ ಮೊಬೈಲ್ ಮೂಲಕ ಮೋಡಿ ಮಾಡುವ ಯೋಜನೆ ಆರಂಭಿಸಲು ಚಿಂತನೆ ನಡೆಸಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications