ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಂಗಶಂಕರ: ಚೆರಿ ತೋಟದಲ್ಲಿ ಮತ್ತೆ ವಿಹರಿಸಿ

By Mahesh
|
Google Oneindia Kannada News

ಬೆಂಗಳೂರು, ನ.27: ರಂಗಕರ್ಮಿ ವೆಂಕಟೇಶ್ ಪ್ರಸಾದ್ ನೇತೃತ್ವದ ಬೆಂಗಳೂರು ಥಿಯೇಟರ್ ಕಂಪನಿ, ಆಂಟನ್ ಚೆಕಾಫ್ ನ 'ದಿ ಚೆರ್ರಿ ಆರ್ಚರ್ಡ್' ನಾಟಕದ ಕನ್ನಡಾನುವಾದ, ಚೆರ್ರಿ ತೋಟ ನಾಟಕವನ್ನು ಮತ್ತೊಮ್ಮೆ ರಂಗಶಂಕರದಲ್ಲಿ ಮೂಡಿಸುತ್ತಿದೆ. ನವೆಂಬರ್ 29ರಂದು ಎಂಟನೇ ಹಾಗೂ ಒಂಭತ್ತನೇ ಪ್ರದರ್ಶನವನ್ನು ನೀಡುತ್ತಿದೆ.

ರಷ್ಯಾದ ಮಹಾನ್ ಲೇಖಕ, ನಾಟಕಕಾರ ಆಂಟನ್ ಚೆಕಾಫ್ 1904 ರಲ್ಲಿ ಬರೆದ ತನ್ನ ಕೊನೆಯ ನಾಟಕ 'ದಿ ಚೆರ್ರಿ ಆರ್ಚರ್ಡ್' ವಿಶ್ವದ ಶ್ರೇಷ್ಟ ನಾಟಕ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಬದಲಾದ ಸಾಮಾಜಿಕ, ರಾಜಕೀಯ ವ್ಯವಸ್ಥೆಗಳು ತೋರಬಹುದಾದ ಪಲ್ಲಟಗಳು, ಸ್ಥಿತ್ಯಂತರಗಳನ್ನು ಒಂದು ಚೆರ್ರಿ ತೋಟದ ಪ್ರತಿಮೆಯ ಮೂಲಕ ಹೆಣೆದಿರುವ ಚೆಕಾಫ್‌ನ ಈ ನಾಟಕ ತನ್ನ ದೇಶ, ಕಾಲಗಳನ್ನು ಮೀರಿ ಪ್ರಸ್ತುತವಾಗಿದೆ

ಬೆಂಗಳೂರು ಥಿಯೇಟರ್ ಕಂಪನಿ: ರಂಗಭೂಮಿಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡು, ರಂಗಭೂಮಿಯ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದ ಕೆಲವು ಗೆಳೆಯರೊಂದಿಗೆ ವೆಂಕಟೇಶ್ ಪ್ರಸಾದ್ ಅವರು ಪ್ರಾರಂಭಿಸಿದ ತಂಡವೇ ಬೆಂಗಳೂರು ಥಿಯೇಟರ್ ಕಂಪನಿ.

ಹವ್ಯಾಸಿ ರಂಗಭೂಮಿಯಲ್ಲೂ ವೃತ್ತಿಪರತೆ, ಕನ್ನಡ ರಂಗಭೂಮಿಯಲ್ಲಿ ವೃತ್ತಿಪರತೆಯಿಂದ ಕೂಡಿದ ಹೊಸ ಪ್ರಯೋಗಗಳ ಮೂಲಕ ರಂಗಭೂಮಿಯನ್ನು ಅಭ್ಯಸಿಸುವುದು, ರಂಗಭೂಮಿಯ ಎಲ್ಲ ಪ್ರಕಾರಗಳಲ್ಲಿ ನೈಪುಣ್ಯ ಹೊಂದಿರುವ, ಸಂಪೂರ್ಣ ಬದ್ಧತೆಯಿರುವ ತಂಡವೊಂದನ್ನು ತಯಾರು ಮಾಡುವುದು, ಸಾಮಾಜಿಕ ಬದ್ಧತೆಯನ್ನು ರಂಗಕ್ರಿಯೆಯ ಮೂಲಕ ಅಭಿವ್ಯಕ್ತಿ ಪಡಿಸುವುದು ಇವೇ ನಮ್ಮ ತಂಡದ ಕೆಲವು ಧ್ಯೇಯಗಳು.

ನಮ್ಮ ತಂಡದ ಬೆನ್ನೆಲುಬು, ಮಾರ್ಗದರ್ಶಕರು

ನಮ್ಮ ತಂಡದ ಬೆನ್ನೆಲುಬು, ಮಾರ್ಗದರ್ಶಕರು

ನಮ್ಮ ತಂಡದ ಬೆನ್ನೆಲುಬಾಗಿ, ಮಾರ್ಗದರ್ಶಕರಾಗಿ ನಿಂತಿರುವವರು ಪ್ರಕಾಶ್ ಬೆಳವಾಡಿ, ಶ್ರೀಪಾದ್ ಭಟ್ ಹಾಗೂ ಸಮುದಾಯ ಕರ್ನಾಟಕ ಸಂಘಟನೆ. ಬೆಂಗಳೂರು ಥಿಯೇಟರ್ ಕಂಪನಿಯ ನಾಲ್ಕು ಸ್ಥಾಪಕ ಸದಸ್ಯರು ವೆಂಕಟೇಶ್ ಪ್ರಸಾದ್, ವಿನಯ್ ಚಂದ್ರ, ಸುಷ್ಮಾ ರಾವ್ ಮತ್ತು ಅರುಣ್ ಡಿ.ಟಿ.

ಚೆರಿ ತೋಟ ನಾಟಕದ ಬಗ್ಗೆ

ಚೆರಿ ತೋಟ ನಾಟಕದ ಬಗ್ಗೆ

ರಷ್ಯಾದ ಮಹಾನ್ ಲೇಖಕ, ನಾಟಕಕಾರ ಆಂಟನ್ ಚೆಕಾಫ್ 1904 ರಲ್ಲಿ ಬರೆದ ತನ್ನ ಕೊನೆಯ ನಾಟಕ 'ದಿ ಚೆರ್ರಿ ಆರ್ಚರ್ಡ್' ವಿಶ್ವದ ಶ್ರೇಷ್ಟ ನಾಟಕ ಕೃತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಬದಲಾದ ಸಾಮಾಜಿಕ, ರಾಜಕೀಯ ವ್ಯವಸ್ಥೆಗಳು ತೋರಬಹುದಾದ ಪಲ್ಲಟಗಳು, ಸ್ಥಿತ್ಯಂತರಗಳನ್ನು ಒಂದು ಚೆರ್ರಿ ತೋಟದ ಪ್ರತಿಮೆಯ ಮೂಲಕ ಹೆಣೆದಿರುವ ಚೆಕಾಫ್‌ನ ಈ ನಾಟಕ ತನ್ನ ದೇಶ, ಕಾಲಗಳನ್ನು ಮೀರಿ ಪ್ರಸ್ತುತವಾಗಿದೆ.

ಹಲವು ಪ್ರತಿಮೆಗಳ ಸಂಕೇತ

ಹಲವು ಪ್ರತಿಮೆಗಳ ಸಂಕೇತ

ನಾಟಕದ ಕೇಂದ್ರವಾದ ಚೆರ್ರಿ ತೋಟ, ಹಲವು ಪ್ರತಿಮೆಗಳ ಸಂಕೇತವಾಗಿ ಕಾಣುತ್ತದೆ. ಬಾಲ್ಯದ ಸುಂದರ ನೆನಪುಗಳ ಪ್ರತೀಕವಾಗಿ ಒಮ್ಮೆ ಚೆರ್ರಿ ತೋಟ ಕಂಡರೆ, ಪರಿಸರ-ಪೃಕೃತಿಯ ಸುಂದರ ದೃಶ್ಯವಾಗಿ ಕೂಡ ಕಾಣುತ್ತದೆ. ಅಷ್ಟೇ ಅಲ್ಲದೆ, ಶತಮಾನಗಳ ಕಾಲ ಜನಸಮುದಾಯದಲ್ಲಿ ಬೇರು ಬಿಟ್ಟಿರುವ ನಂಬಿಕೆಯಾಗಿ ಕೂಡ ಚೆರ್ರಿ ತೋಟ ಗೋಚರಿಸುತ್ತದೆ.

ಹೀಗೆ ಹಲವು ಧ್ವನಿಗಳನ್ನು, ಹಲವು ಅರ್ಥಗಳನ್ನು ಹೊಮ್ಮಿಸುತ್ತಾ ಸಾಗುವ ನಾಟಕ, ಭಾರತದಂತ ಭಿನ್ನ ವ್ಯವಸ್ಥೆಯಲ್ಲೂ ಪ್ರಸ್ತುತವಾಗಿ ಕಾಣುವ ಮೂಲಕ ಸಾರ್ವಕಾಲಿಕ ಶ್ರೇಷ್ಟ ನಾಟಕವೆಂದೆನಿಸಿಕೊಳ್ಳುತ್ತದೆ.

ಚೆರ್ರಿ ತೋಟ ವಿವರ

ಚೆರ್ರಿ ತೋಟ ವಿವರ

ಮೂಲ : ಆಂಟನ್ ಚೆಕಾಫ್
ಕನ್ನಡಕ್ಕೆ : ವೆಂಕಟೇಶ್ ಪ್ರಸಾದ್
ಪ್ರಸ್ತುತಿ : ಬೆಂಗಳೂರು ಥಿಯೇಟರ್ ಕಂಪನಿ
ವಿನ್ಯಾಸ ಮತ್ತು ನಿರ್ದೇಶನ : ವೆಂಕಟೇಶ್ ಪ್ರಸಾದ್

ಸ್ಥಳ: ರಂಗಶಂಕರ
ದಿನಾಂಕ ಮತ್ತು ಸಮಯ : 29/11/2015 , ಮಧ್ಯಾಹ್ನ 3:30, ಸಂಜೆ 7:30
ಟಿಕೆಟ್‌ದರ : ರೂ. 100/-
ದೂರವಾಣಿ ಸಂಖ್ಯೆ : 9900182400, 9483709735
ವೆಬ್ ಸೈಟ್ : www.bookmyshow.com ; www.filmysphere.com

English summary
Bangalore Theatre Company led by Venkatesh Prasad presents Anton Chekhov's "The Cherry Orchard" in Kannada The play is translated and directed by Venkatesh Prasad. The 8th and 9th show of the play will be stage Ranga Shankara on 29/11/2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X