ತಳ್ಳಾಟ-ನೂಕಾಟ: ರಣಾಂಗಣವಾದ ಬಿಬಿಎಂಪಿ ಕೌನ್ಸಿಲ್ ಸಭೆ
ಬೆಂಗಳೂರು.ಏಪ್ರಿಲ್, 29: ಶುಕ್ರವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆವರಣ ರಣಾಂಗಣವಾಗಿ ಮಾರ್ಪಟ್ಟಿತ್ತು. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ತಳ್ಳಾಟ ನಡೆದಿದ್ದು ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಅಸ್ವಸ್ಥರಾದ ಪ್ರಸಂಗವೂ ನಡೆಯಿತು.
ಬಿಬಿಎಂಪಿ ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಸದಸ್ಯರು ಅಡ್ಡಗಟ್ಟಿದಾಗ ನೂಕಾಟ ಆರಂಭವಾಯಿತು. ಉಭಯ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು. [ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ?]
ಮೇಯರ್ ಅವರನ್ನು ತಡೆದ್ದಕ್ಕೆ ನಾವು ವಿರೋಧ ವ್ಯಕ್ತಪಡಿಸಿದೆವು ಎಂದು ಕಾಂಗ್ರೆಸ್ ಸದಸ್ಯರು ಹೇಳಿದ್ದಾರೆ. ಬಿಜೆಪಿಯ ಪದ್ಮನಾಭ ರೆಡ್ಡಿ, ಉಮೇಶ್ ಶೆಟ್ಟಿ ಮತ್ತು ರಮೇಶ್ ಕುಮಾರ್ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದ್ದು ಗೊಂದಲ ಬಗೆಹರಿಯದ ಕಾರಣ ಸಭೆಯನ್ನು ಮುಂದೂಡಲಾಗಿದೆ.[ಆನ್ ಲೈನ್ ಮೂಲಕ ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಸಿ]
ಆಸ್ತಿ ತೆರಿಗೆ ಏರಿಕೆಯನ್ನು ವಿರೋಧಿಸಿ ಬಿಜೆಪಿ ಮಹಾನಗರದಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಮೇ 3 ರಂದು ಮಲ್ಲೇಶ್ವರಂ ಮೈದಾನದಿಂದ ಮೆರವಣಿಗೆ ಹೊರಟು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕುತ್ತೇನೆ ಎಂದು ಹೇಳಿದೆ.