ಬೆಂಗಳೂರು: ಅಪ್ರಾಪ್ತ ಯುವತಿ ಮೇಲೆ ಇವೆಂಟ್ ಮ್ಯಾನೇಜರ್ ಅತ್ಯಾಚಾರ
ಹದಿನೇಳರ ಯುವತಿಯ ಮೇಲೆ ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜರ್ ಪ್ರಗದೀಶ್ ಅತ್ಯಾಚಾರ ಎಸಗಿದ್ದಾನೆ. ಆತನ ಬಳಿ ಕೆಲವು ಮಾಡೆಲ್ ಗಳ ಫೊಟೋ ಸಿಕ್ಕಿದ್ದು, ಅವರನ್ನು ಬ್ಲ್ಯಾಕ್ ಮೇಲ್ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ
ಬೆಂಗಳೂರು, ಫೆಬ್ರವರಿ 9: ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 26 ವರ್ಷದ ಇವೆಂಟ್ ಮ್ಯಾನೇಜರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಗದೀಶ್ ಕಪೂರ್ ಬಂಧಿತ. ಹದಿನೇಳು ವರ್ಷದ ಯುವತಿ ನೀಡಿದ ದೂರಿನ ಅನ್ವಯ ಅತನನ್ನು ಪೊಲೀಸರ್ ವಶಕ್ಕೆ ಪಡೆದಿದ್ದಾರೆ.
ಪ್ರಗದೀಶ್ ಮನೆಯಲ್ಲೇ ಶನಿವಾರ ಅತ್ಯಾಚಾರ ನಡೆದಿದೆ. ಮುಂಬೈ ಮೂಲದ ಯುವತಿ ಸದ್ಯಕ್ಕೆ ಬೆಂಗಳೂರಿನಲ್ಲಿ ಫ್ಯಾಷನ್ ಡಿಸೈನ್ ಕೋರ್ಸ್ ಮಾಡುತ್ತಿದ್ದಾಳೆ. ಮಾಡೆಲಿಂಗ್ ಗೆ ಸಂಬಂಧಿಸಿದ ಕೆಲವು ಅಸೈನ್ ಮೆಂಟ್ ಗಳಿವೆ ಎಂದು ಪುಸಲಾಯಿಸಿದ ಪ್ರಗದೀಶ್ ತನ್ನ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಹಾಲಿಗೆ ಮತ್ತು ಬರುವ ಔಷಧಿ ಬೆರೆಸಿ ನೀಡಿದ್ದಾನೆ.[ತರಬೇತಿ ಪಡೆಯಲು ಬಂದವಳನ್ನೇ ರೇಪ್ ಮಾಡಿದ ಯೋಗ ಗುರು]

ಆ ಯುವತಿ ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿದ ಆತ, ವಿಡಿಯೋ ಕೂಡ ಮಾಡಿಕೊಂಡಿದ್ದಾನೆ. ಆ ವಿಡಿಯೋ ತೋರಿಸಿ, ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ ಪ್ರಗದೀಶ್ ಮೇಲೆ ಯುವತಿ ಪೊಲೀಸರಲ್ಲಿ ದೂರು ನೀಡಿದ್ದಾಳೆ. "ಮನೆಯೊಳಗೆ ಹೋಗುತ್ತಿದ್ದಂತೆ ಬಾಗಿಲು ಹಾಕಿದ. ನನ್ನ ಜೊತೆ ಮಲಗು ಎಂದು ಪೀಡಿಸಲಾರಂಭಿಸಿದ
"ನನಗೆ ಹುಷಾರಿಲ್ಲ. ಹೊರಡಬೇಕು ಎಂದು ಅವಸರಿಸಿದಾಗ ಬಲವಂತವಾಗಿ ಹಾಲು ಕುಡಿಯುವಂತೆ ಮಾಡಿದ. ಅ ನಂತರ ನಾನು ಪ್ರಜ್ಞೆ ತಪ್ಪಿದೆ. ಆಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾನೆ. ಅದನ್ನು ಡಿಲೀಟ್ ಮಾಡುವಂತೆ ನಾನು ಕೇಳಿದರೆ, ಮತ್ತೊಂದು ಸಲ ನನ್ನ ಜೊತೆ ಮಲಗಿದರೆ ಡಿಲೀಟ್ ಮಾಡ್ತೀನಿ ಅಂದ" ಎಂದು ಆ ಯುವತಿ ಹೇಳಿದ್ದಾಳೆ.[ಸೌಜನ್ಯ ಪ್ರಕರಣ: ಹೆಚ್ಚಿನ ತನಿಖೆಗೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶ]
ಪ್ರಗದೀಶ್ ಬಳಿ ಕೆಲವು ಮಾಡೆಲ್ ಗಳ ಫೋಟೋ ಸಿಕ್ಕಿವೆ. ಅವರನ್ನು ಈತ ಬ್ಲ್ಯಾಕ್ ಮೇಲ್ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications