7 ಲೈಂಗಿಕ ದೌರ್ಜನ್ಯ ಕೇಸ್, ನರ್ಸರಿ ಶಾಲೆಗೆ ಬೀಗ ಜಡಿದ ಸರ್ಕಾರ
ಇನ್ನೂ ಅಂಬೆಗಾಲಿಡುತ್ತಿದ್ದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ನರ್ಸರಿ ಶಾಲೆಯ ಸಿಬ್ಬಂದಿ ಮಂಜುನಾಥನನ್ನು ಬಂಧಿಸಲಾಗಿತ್ತು. ಈತನ ಮೇಲೆ 7 ಎಫ್ಐಆರ್ ದಾಖಲಾಗುತ್ತಿದ್ದಂತೆ ಸರಕಾರ ಶಾಲೆ ಮುಚ್ಚಲು ಆದೇಶ ಹೊರಡಿಸಿದೆ.
ಬೆಂಗಳೂರು, ಮಾರ್ಚ್ 5: ಇನ್ನೂ ಅಂಬೆಗಾಲಿಡುತ್ತಿದ್ದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ನರ್ಸರಿ ಶಾಲೆಯ ಸಿಬ್ಬಂದಿ ಮಂಜುನಾಥನನ್ನು ಬಂಧಿಸಲಾಗಿತ್ತು. ಈತನ ಮೇಲೆ 7 ಎಫ್ಐಆರ್ ದಾಖಲಾಗುತ್ತಿದ್ದಂತೆ ಸರಕಾರ ಶಾಲೆ ಮುಚ್ಚಲು ಆದೇಶ ಹೊರಡಿಸಿದೆ.
ಶಾಲಾ ಮಕ್ಕಳಿಗೆ ಸುರಕ್ಷತೆ ನೀಡುವಲ್ಲಿ ವಿಫಲವಾದ ಹಾಗೂ ನಿಯಮಾವಳಿಗಳನ್ನು ಪಾಲಿಸದ ಹಿನ್ನಲೆಯಲ್ಲಿ ವಲಯ ಶಿಕ್ಷಣಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಶಾಲೆಯ ಮೇಲೆ ಕೇಸುಗಳು ದಾಖಲಾದ ನಂತರ ಪೊಲೀಸರು ಶಾಲೆಯ ಮುಖ್ಯೋಪಾಧ್ಯಾರನ್ನು ಬಂಧಿಸಿದ್ದರು. ಆದರೆ ನಂತರ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.[ಬೆಂಗಳೂರಿನ ಶಾಲೆಯೊಂದರಲ್ಲಿ ಹಲವು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ]
ವಲಯ ಶಿಕ್ಷಣಾಧಿಕಾರಿ ಶಾಲೆಗೆ ಬರೆದಿರುವ ಪತ್ರದಲ್ಲಿ, "ಪೋಷಕರು ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ದೂರು ಸಲ್ಲಿಸಿದಾಗಲೂ ಶಾಲೆ ಸ್ಪಂದಿಸಿಲ್ಲ. ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸುವಲ್ಲಿ ಶಾಲೆ ವಿಫಲವಾಗಿದೆ. ಹಾಗಾಗಿ ಶಾಲೆ ತೆರೆಯುವುದು ಸರಿಯಲ್ಲ," ಎಂದು ಪತ್ರದಲ್ಲಿ ತಿಳಿಸಿದ್ದಾರೆ.[ಪ್ರೀತಿ ವಿಚಾರದಲ್ಲಿ ಗಲಾಟೆ, ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಇರಿದು ಕೊಲೆ]
ಇದೇ ಪತ್ರದಲ್ಲಿ ಪೋಷಕರು ಹತ್ತಿರದ ನಿಯಮಾನುಸಾರ ನಡೆಯುತ್ತಿರುವ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವಂತೆ ಮನವಿ ಮಾಡಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ಶಾಲೆ ತೆರೆಯಬಾರದು ಎಂದು ಪೋಷಕರು ರೊಚ್ಚಿಗೆದ್ದಿದ್ದರು. ಇದೀಗ ಸರಕಾರವೇ ಅಧಿಕೃತವಾಗಿ ಶಾಲೆಗೆ ಬೀಗ ಜಡಿದಿದೆ. (ಒನ್ ಇಂಡಿಯಾ ಸುದ್ದಿ)