ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾವು ತಂದೆ ತಾಯಿಗೆ ಹುಟ್ಟಿದವರು ಪಕ್ಷ ಬಿಡಲ್ಲ : ಈಶ್ವರಪ್ಪ

ನಾವು ತಂದೆ-ತಾಯಿಗೆ ಹುಟ್ಟಿದವರು, ಜೀವ ಹೋದರೂ ಯಾವ ಕಾರಣಕ್ಕೂ ಬೇರೆ ಪಕ್ಷಕ್ಕೆ ಹೋಗಲ್ಲ, ಬೇರೆ ಪಾರ್ಟಿ ಕಟ್ಟಲ್ಲ ಎಂದು ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಅವರು, ಭಿನ್ನಮತೀಯ ಸಭೆಯ ಗದ್ದಲ ನಂತರ ಪ್ರತಿಕ್ರಿಯಿಸಿದ್ದಾರೆ.

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 27: ನಾವು ತಂದೆ-ತಾಯಿಗೆ ಹುಟ್ಟಿದವರು, ಜೀವ ಹೋದರೂ ಯಾವ ಕಾರಣಕ್ಕೂ ಬೇರೆ ಪಕ್ಷಕ್ಕೆ ಹೋಗಲ್ಲ, ಬೇರೆ ಪಾರ್ಟಿ ಕಟ್ಟಲ್ಲ ಎಂದು ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಅವರು, ಭಿನ್ನಮತೀಯ ಸಭೆಯ ಗದ್ದಲ ನಂತರ ಪ್ರತಿಕ್ರಿಯಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಗುರುವಾರ ಬಿಜೆಪಿಯ ಭಿನ್ನಮತರ ಸಮಾವೇಶ ನಂತರ ಈಶ್ವರಪ್ಪ ಅವರು ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.[ಅತೃಪ್ತರ ಸಮಾವೇಶದಲ್ಲಿ ಈಶ್ವರಪ್ಪ-ಬಿಎಸ್ವೈ ಬೆಂಬಲಿಗರ ಮಾರಾಮಾರಿ]

BJP Crisis : I am not leaving BJP and not joining any party : KS Eshwarappa

ಪ್ರಾಮಾಣಿಕ ಕಾರ್ಯಕರ್ತರನ್ನು ಅಮಾನತು ಮಾಡುತ್ತೀರಾ?, ನಮ್ಮ ತಂಟೆಗೆ ಬಂದರೆ ಹುಷಾರ್. ನಮಗೆ ಇಂದು ಸಭೆ ನಡೆಸದಂತೆ ನೀವು ಎಚ್ಚರಿಕೆ ನೀಡುತ್ತೀರಾ, ನಾವು ಈ ಸಭೆಯ ಮೂಲಕ ನಿಮಗೆ ಎಚ್ಚರಿಕೆ ನೀಡುತ್ತೇವೆ' ಎಂದು ಯಡಿಯೂರಪ್ಪಗೆ ಈಶ್ವರಪ್ಪ ಎಚ್ಚರಿಕೆ ನೀಡಿದರು.

ನೀವು ಈ ಹಿಂದೆ ಕೆಜಿಪಿ ಪಕ್ಷ ಕಟ್ಟಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣರಾಗಿದ್ದೀರಿ. ನಿಮ್ಮಿಂದ ನಾವು ಪಾಠ ಕಲಿಯಬೇಕಾಗಿಲ್ಲ. ನಿಮ್ಮ ಧೋರಣೆ ಸರಿಯಲ್ಲ. ಪಕ್ಷ ಬಿಟ್ಟು ಹೋದವರು ನಮಗೆ ಪಾಠ ಕಲಿಸುವ ಅಗತ್ಯವಿಲ್ಲ'' ಎಂದು ಈಶ್ವರಪ್ಪ ಕಿಡಿಕಾರಿದರು.

English summary
BJP Crisis : I am not leaving BJP and not joining any party said Senior leader KS Eshwarappa today after the dissidence meet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X