ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ : ಹೈಕೋರ್ಟ್

|
Google Oneindia Kannada News

ಬೆಂಗಳೂರು, ಮಾ. 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ. ಏ.22ಕ್ಕೆ ಬಿಬಿಎಂಪಿಯ ಆಡಳಿತಾವಧಿ ಕೊನೆಗೊಳ್ಳಲಿದೆ.

ಬಿಜೆಪಿಯ ಬಿಬಿಎಂಪಿ ಸದಸ್ಯ­ರಾದ ಸಿ.ಕೆ.ರಾಮಮೂರ್ತಿ ಮತ್ತು ಬಿ.ಸೋಮಶೇಖರ್‌ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಕಾಲದಲ್ಲಿ ಚುನಾವಣೆ ನಡೆಸಿ, ಬಿಬಿಎಂಪಿ ವಿಭಜನೆ ಪ್ರಸ್ತಾಪ ಮುಂದಿಟ್ಟುಕೊಂಡು ಚುನಾವಣೆಯನ್ನು ಮುಂದೂಡಬೇಡಿ ಎಂದು ಸೋಮವಾರ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಅನ್ವಯ ಮೇ.30ರೊಳಗೆ ಬಿಬಿಎಂಪಿ ಚುನಾವಣೆ ನಡೆಯಬೇಕಾಗಿದೆ. [ಬಿಬಿಎಂಪಿ ವಿಭಜನೆ ಹೇಗೆ?, ಸಂಕ್ಷಿಪ್ತ ಮಾಹಿತಿ]

High Court

ಏ.22ಕ್ಕೆ ಬಿಬಿಎಂಪಿ ಸದಸ್ಯರ ಆಡಳಿತ ಅವಧಿ ಪೂರ್ಣಗೊಳ್ಳುತ್ತಿದೆ. ಆದರೆ, ರಾಜ್ಯ ಸರ್ಕಾರ ಹೊಸ ಚುನಾವಣೆಯ ಬಗ್ಗೆ ಗಂಭೀರ ಆಲೋಚನೆ ಮಾಡಿಲ್ಲ. ಬದಲಿಗೆ ಬಿಬಿಎಂಪಿ ವಿಭಜನೆ ವಿಚಾರದಲ್ಲಿ ಮಗ್ನವಾಗಿದ್ದು, ಚುನಾವಣೆಯನ್ನು ಮುಂದೂಡಲು ಪ್ರಯತ್ನ ನಡೆಸಿದೆ ಎಂದು ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.[2015-16ಸಾಲಿನ ಬಿಬಿಎಂಪಿ ಬಜೆಟ್ ಮುಖ್ಯಂಶಗಳು]

ಸದಸ್ಯರ ಅವಧಿ ಮುಗಿಯುವ ಆರು ತಿಂಗಳ ಮುನ್ನವೇ ವಾರ್ಡ್‌ಗಳ ಪುನರ್‌ ವಿಂಗಡಣೆ ಮತ್ತು ಮೀಸಲಾತಿಗಳನ್ನು ಗುರುತಿಸಬೇಕು. ಆದರೆ, ಸರ್ಕಾರ ಈ ಯಾವುದೇ ಪ್ರಕ್ರಿಯೆಗಳನ್ನು ಕೈಗೊಳ್ಳದೇ ಚುನಾವಣೆಯನ್ನು ಮುಂದೂಡಲು ಪ್ರಯತ್ನ ನಡೆಸಿದೆ ಸಕಾಲದಲ್ಲಿ ಚುನಾವಣೆ ನಡೆಸಲು ಆದೇಶ ನೀಡಬೇಕು ಎಂದು ರಿಟ್ ಅರ್ಜಿಯಲ್ಲಿ ಕೋರಲಾಗಿತ್ತು.

ಪಾಲಿಕೆ ವಿಭಜನೆಗೆ ಸರ್ಕಾರದ ಒಪ್ಪಿಗೆ : 198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಯನ್ನು ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ಎಂದು ಮೂರು ಪಾಲಿಕೆಗಳಾಗಿ ವಿಭಜಿಸಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ.

English summary
Karnataka High Court ordered the government to conduct The Bruhat Bengaluru Mahanagara Palike (BBMP) election on time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X