ಜಾರಿ ನಿರ್ದೇಶನಾಲಯದ ಸೂಚನೆ, ಫೆರಾ ಕೇಸಲ್ಲಿ ಶಶಿಕಲಾ ವಿಚಾರಣೆ
ಫೆರಾ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ಶಶಿಕಲಾ ನಟರಾಜನ್ ವಿಚಾರಣೆ ಎದುರಿಸಬೇಕು ಎಂದು ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ. ಅಂದಹಾಗೆ ಇದು 20 ವರ್ಷದ ಹಿಂದಿನ ಪ್ರಕರಣ. ಒಂದು ವೇಳೆ ಶಿಕ್ಷೆಯಾದರೆ ಶಶಿಕಲಾ ಜೈಲು ಶಿಕ್ಷೆ ಪ್ರಮಾಣ ಹೆಚ್ಚುತ್ತದೆ
ಬೆಂಗಳೂರು, ಏಪ್ರಿಲ್ 12: ವಿದೇಶಿ ವಿನಿಮಯ ನಿಯಮಗಳ ಕಾಯ್ದೆ ಉಲ್ಲಂಘನೆ ಪ್ರಕರಣ ಶಶಿಕಲಾ ನಟರಾಜನ್ ವಿರುದ್ಧ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಸೂಚಿಸಿದೆ. ಎರಡು ದಶಕಗಳಷ್ಟು ಹಳೆಯ ಪ್ರಕರಣವಾದ ಇದರಲ್ಲಿ ಶಶಿಕಲಾ ಮತ್ತಿತರರು ವಿಚಾರಣೆ ಎದುರಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಈಚೆಗೆ ಹೇಳಿತ್ತು.
ಆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ. ಶಶಿಕಲಾ ಮತ್ತು ಇತರ ಸಹ ಆರೋಪಿಗಳು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ (ಆರ್ಥಿಕ ಅಪರಾಧ) ಮುಂದೆ ಹಾಜರಾಗಿ, ವಿಚಾರಣೆ ಎದುರಿಸಬೇಕಾಗುತ್ತದೆ. ಆದರೆ ಶಶಿಕಲಾ ವೈಯಕ್ತಿಕವಾಗಿ ಕೋರ್ಟ್ ಗೆ ಹಾಜರಾಗುತ್ತಾರಾ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.[ಜೈಲಿನಿಂದಲೇ ಶಶಿಕಲಾ ತ.ನಾಡು ಸರಕಾರ ನಡೆಸುತ್ತಿರುವುದು ಹೇಗೆ?]

ಸದ್ಯ ಶಶಿಕಲಾ ಅವರು ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಬೆಂಗಳೂರು ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ಇನ್ನೂ ಬಾಕಿ ಇದೆ. ಒಂದು ವೇಳೆ 'ಫೆರಾ' ಪ್ರಕರಣದಲ್ಲಿ ದೋಷಿ ಎಂದಾದರೆ ಜೈಲಿನಲ್ಲಿ ಇನ್ನೂ ಹೆಚ್ಚುವರಿ ಸಮಯ ಕಳೆಯಬೇಕಾಗುತ್ತದೆ.[ಶಶಿಕಲಾ ನಟರಾಜನ್ ಬೇರೆ ಜೈಲಿಗೆ ವರ್ಗ ಸಾಧ್ಯವಿಲ್ಲ: ಹೈಕೋರ್ಟ್]
ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷದ ಜೈಲು ಶಿಕ್ಷೆ ಪೂರೈಸಿದ ನಂತರ ತಮಿಳುನಾಡಿನ ಜೈಲಿಗೆ ಸ್ಥಳಾಂತರಿಸಿ, ಫೆರಾ ಪ್ರಕರಣದಲ್ಲಿ ವಿಧಿಸಿದ ಶಿಕ್ಷೆ ಅವಧಿ ಪೂರೈಸಬೇಕಾಗುತ್ತದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications