ಇದು ಬೆಳ್ಳಂದೂರು ಕೆರೆಯೋ ಅಥವಾ ನೊರೆಯೋ!
ಸ್ವಲ್ಪ ದಿನಗಳ ಹಿಂದಷ್ಟೇ ಇಲ್ಲಿ ಬೆಂಕಿ ಮತ್ತು ನೊರೆ ಕಾಣಿಸಿಕೊಂಡು ಸುದ್ದಿಯಾಗಿತ್ತು. ಆಗ ಬಿಬಿ ಎಂಪಿ ಮೇಯರ್ ಪದ್ಮಾವತಿ ಇಲ್ಲಿಗೆ ಭೇಟಿಯಾಗಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು.
ಬೆಂಗಳೂರು, ಮಾರ್ಚ್ 8: ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಏನೆಲ್ಲ ಅವಾಂತರ ಸೃಷ್ಟಿ ಮಾಡಿದೆ ಎಂಬ ಸುದ್ದಿಯನ್ನು ಈಗಾಗಲೇ ಓದಿದ್ದೇವೆ. ಇದೀಗ ಮತ್ತೆ ಬೆಳ್ಳಂದೂರು ಕೆರೆಯಲ್ಲಿ ನೊರೆ ಏಳುತ್ತಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ದುರ್ವಾಸನೆ ಹಬ್ಬಿ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ನೊರೆ ರಸ್ತೆಯನ್ನೂ ವ್ಯಾಪಿಸುತ್ತಿದ್ದು, ಸಾಂಕ್ರಾಮಿಕ ರೋಗದ ಭೀತಿಯಿಂದ ಇಲ್ಲಿನ ಜನರು ಕಂಗಾಲಾಗಿದ್ದಾರೆ.[ಬೆಳ್ಳಂದೂರು ಕೆರೆ ಮತ್ತೆ ನೊರೆ ಉಗುಳಲು ಯಾರು ಕಾರಣ?]
ಸ್ವಲ್ಪ ದಿನಗಳ ಹಿಂದಷ್ಟೇ ಇಲ್ಲಿ ಬೆಂಕಿ ಮತ್ತು ನೊರೆ ಕಾಣಿಸಿಕೊಂಡು ಸುದ್ದಿಯಾಗಿತ್ತು. ಆಗ ಬಿಬಿ ಎಂಪಿ ಮೇಯರ್ ಪದ್ಮಾವತಿ ಇಲ್ಲಿಗೆ ಭೇಟಿಯಾಗಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು. ಆದರೆ ಈಗ ಮತ್ತೊಮ್ಮೆ ನೊರೆ ಕಾಣಿಸಿಕೊಂಡಿರುವುದು ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎನ್ನಿಸಿದೆ.[ಬೆಂಗಳೂರು ಕೆರೆಗಳ ಮೇಲೆ 24/7 ಕಣ್ಗಾವಲು]
ಬೆಂಗಳೂರಿನಲ್ಲಿ ಮಂಗಳವಾರ ರಭಸವಾಗಿ ಸುರಿದ ಮಳೆಯಿಂದಾಗಿ ಕೆರೆಯಲ್ಲಿ ನೀರು ಹೆಚ್ಚುತ್ತಿದ್ದು, ನೊರೆಯೂ ಏರುತ್ತಲೇ ಇರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಸಾಧ್ಯತೆ ಇದೆ.