Rally for Rivers ಗೆ ಮೈಸೂರು ಆನೆರಾಯನ ಬೆಂಬಲ!
ಬೆಂಗಳೂರು, ಸೆಪ್ಟೆಂಬರ್ 1: ತಮಿಳುನಾಡಿನ ಕೋಯಿಮತ್ತೂರಿನಿಂದ ಇಂದು(ಸೆಪ್ಟೆಂಬರ್ 1) ಆರಂಭವಾಗಲಿರುವ ಸದ್ಗುರು ಜಗ್ಗಿ ವಾಸುದೇವ ಅವರ Rally for Rivers ಗೆ ಬೆಂಗಳೂರಿನಲ್ಲೂ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಶಾಲೆಯೊಂದರ ಮಕ್ಕಳು ರ್ಯಾಲಿ ಫಾರ್ ರಿವರ್ಸ್ ಘೋಷಣೆಯೊಂದಿಗೆ ಮೆರವಣಿಗೆ ಮಾಡಿ ಗಮನ ಸೆಳೆದರು.
ಭವಿಷ್ಯಕ್ಕಾಗಿ ನದಿಗಳನ್ನು ಉಳಿಸುವ ಬಗ್ಗೆ ಮಕ್ಕಳೇ ಕಾಳಜಿ ವಹಿಸಿ, ಮೆರವಣಿಗೆ ಮಾಡಿದ್ದು ವಿಶೇಷವಾಗಿತ್ತು. ಹಾಗೆಯೇ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನೀಲಿ ಬಣ್ಣದ ಬಟ್ಟೆ ತೊಟ್ಟ ಜನ ರ್ಯಾಲಿ ಫಾರ್ ರಿವರ್ಸ್ ಗೆ ಬೆಂಬಲ ನೀಡುತ್ತಿದ್ದುದು ಕಂಡುಬಂತು.
ರಾಜಧಾನಿ ಬೆಂಗಳೂರಿನ ವಿವಿಧ ವೃತ್ತಗಳಲ್ಲಿ ರ್ಯಾಲಿ ಫಾರ್ ರಿವರ್ಸ್ ಬ್ಯಾನರ್ ನೊಂದಿಗೆ ನಿಂತಿದ್ದ ಕಾರ್ಯಕರ್ತರು 80009 80009 ನಂಬರ್ ಗೆ ಮಿಸ್ ಕಾಲ್ ನೀಡುವ ಮೂಲಕ ರ್ಯಾಲಿಗೆ ಬೆಂಬಲ ನೀಡುವಂತೆ ಕೇಳಿದರು.
|
ಮಕ್ಕಳಿಂದ ಮೆರವಣಿಗೆ
'ನದಿ ಉಳಿಸಿ' ಎಂದು ಪುಟ್ಟ ಮಕ್ಕಳು ಮೆರವಣಿಗೆ ಮಾಡುತ್ತಿದ್ದ ದೃಶ್ಯವನ್ನು ದಿವ್ಯಶ್ರೀ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
|
ನದಿ ಉಳಿವಿಗಾಗಿ ಇಡೀ ದಿನ ನಿಲ್ಲಬಲ್ಲೆ!
ನಮ್ಮ ನದಿಯನ್ನು ಉಳಿಸುವುದಕ್ಕಾಗಿ, ಅಗತ್ಯವಿದ್ದರೆ ಇಡೀ ದಿನ ಬೇಕಾದರೂ ನಾನು ಹೀಗೆಯೇ ನಿಲ್ಲಬಲ್ಲೆ ಎಂದು ಶಾಜನ್ ಸಾಮ್ಯುಯೆಲ್ ಎಂಬುವವರು ತಮ್ಮ ಫೋಟೋದೊಡನೆ ಟ್ವೀಟ್ ಮಾಡಿದ್ದಾರೆ.
|
ನೀಲಿ ಬಟ್ಟೆಯೊಂದಿಗೆ ನದಿ ಉಳಿಸುವ ಪಣ
ಬೆಂಗಳೂರಿನ ಜಂಕ್ಷನ್ ವೊಂದರಲ್ಲಿ ನೀಲಿ ಶರ್ಟ್ ತೊಟ್ಟು Rally for rivers ಗೆ ವ್ಯಕ್ತಿಯೊಬ್ಬರು ಬೆಂಬಲ ನೀಡುತ್ತಿರುವುದನ್ನು ಸಾಯಿಕೃಷ್ಣ ರಾವ್ ಎನ್ನುವವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇಶಾ ಫೌಂಡೇಶನ್ ನಿಂದ ವಿನೂತನ ಕಾರ್ಯ
ಸದಾ ಒಂದಿಲ್ಲೊಂದು ಸಾಮಾಜಿಕ ಕಾರ್ಯಗಳ ಮೂಲಕ ಹೆಸರಾಗಿರುವ ಇಶಾ ಫೌಂಡೇಶನ್, ನದಿ ಉಳಿಸುವುದಕ್ಕಾಗಿ Rally for Rivers ಎಂಬ ವಿನೂತನ ಕಾರ್ಯಕ್ರಮವೊಂದನ್ನು ಆರಂಭಿಸಿದೆ. ಸೆಪ್ಟೆಂಬರ್ 1 ರಿಂದ ತಮಿಳುನಾಡಿನ ಕೋಯಿಮತ್ತೂರಿನಿಂದ ಆರಂಭವಾಗಲಿರುವ ಈ ರ್ಯಾಲಿ 16 ರಾಜ್ಯಗಳ ಮೂಲಕ ಹಾದುಹೋಗಿ ಅಕ್ಟೋಬರ್ 2 ರಂದು ದೆಹಲಿ ತಲುಪಿ ಮುಕ್ತಾಯವಾಗಲಿದೆ.
|
ನದಿ ರಕ್ಷಣೆಗೆ ಆನೆಯದೂ ಬೆಂಬಲ!
ಮೈಸೂರು ಅರಮನೆಯ ಆನೆಯೊಂದು ರ್ಯಾಲಿ ಫಾರ್ ರಿವರ್ಸ್ ಗೆ ಬೆಂಬಲ ನೀಡಿದ್ದು ಹೀಗೆ!
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications