ನಮ್ಮ ಮೆಟ್ರೋ : 1 ವಾರದ ಆದಾಯ 4 ಕೋಟಿ
ಬೆಂಗಳೂರು, ಮೇ 09 : ನಮ್ಮ ಮೆಟ್ರೋ ಪೂರ್ವ-ಪಶ್ಚಿಮ ಕಾರಿಡಾರ್ ರೈಲು ಸೇವೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದಲ್ಲಿನ ರೈಲು ಸಂಚಾರದಿಂದ 1 ವಾರದಲ್ಲಿ 4 ಕೋಟಿ ರೂ. ಆದಾಯ ಬಂದಿದೆ.
ಸೋಮವಾರ ಬೆಂಗಳೂರಿನಲ್ಲಿ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಪತ್ರಿಕಾಗೋಷ್ಠಿ ನಡೆಸಿದರು. 'ಪ್ರತಿದಿನ ಬೈಯಪ್ಪನಹಳ್ಳಿ-ನಾಯಂಡಹಳ್ಳಿ (ಮೈಸೂರು ರಸ್ತೆ) ಮಾರ್ಗದಲ್ಲಿ 1.45 ಲಕ್ಷ ಜನರು ಸಂಚಾರ ನಡೆಸುತ್ತಿದ್ದಾರೆ' ಎಂದು ಹೇಳಿದರು. [ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮೆಟ್ರೋ ಸಂಚಾರ ಅವಧಿ ವಿಸ್ತರಣೆ?]
ಪೂರ್ವ-ಪಶ್ಚಿಮ ಕಾರಿಡಾರ್ನ ಮಾರ್ಗ ಏಪ್ರಿಲ್ 30ರಂದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. 'ಒಂದು ವಾರದಲ್ಲಿ 4 ಕೋಟಿ ರೂ. ಆದಾಯ ಬಂದಿದೆ. ಮೆಟ್ರೋ ನಿರೀಕ್ಷೆ ಮಾಡಿರುವುದಕ್ಕಿಂತ ಹೆಚ್ಚಿನ ಆದಾಯ ಬರುತ್ತಿದೆ' ಎಂದು ಪ್ರದೀಪ್ ಸಿಂಗ್ ಖರೋಲಾ ತಿಳಿಸಿದರು. [ಸುರಂಗ ಮಾರ್ಗದ ನಮ್ಮ ಮೆಟ್ರೋ ಸಂಚಾರ ಹೇಗಿರುತ್ತದೆ?]
'ಸುರಂಗ ಮಾರ್ಗದಲ್ಲಿ ರೈಲು ಸಂಚಾರ ನಡೆಸುತ್ತಿರುವುದರಿಂದ ನಗರದಲ್ಲಿ ಮಳೆ ಬಂದರೆ ಏನಾಗಬಹುದು? ಎಂಬ ಆತಂಕವಿತ್ತು. ಆದರೆ. ಸತತ ಮೂರು ದಿನ ನಗರದಲ್ಲಿ ಮಳೆ ಸುರಿದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಇದರಿಂದ ನಮ್ಮ ಆತಂಕ ದೂರವಾಗಿದೆ' ಎಂದು ಖರೋಲಾ ಹೇಳಿದರು. [ನಮ್ಮ ಮೆಟ್ರೋ ಪೂರ್ವ-ಪಶ್ಚಿಮ ಕಾರಿಡಾರ್ ದರ ಪಟ್ಟಿ]
2 ವಾರದಲ್ಲಿ ಹಳಿ ಹಾಕುವ ಕಾರ್ಯ : 'ಸಂಪಿಗೆ ರಸ್ತೆಯಿಂದ ಮೆಜೆಸ್ಟಿಕ್ಗೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು, ಹಳಿ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ 2 ವಾರದಲ್ಲಿ ಈ ಕಾಮಗಾರಿ ಮುಗಿಯಲಿದೆ' ಎಂದು ಪ್ರದೀಪ್ ಸಿಂಗ್ ಖರೋಲಾ ತಿಳಿಸಿದರು.
70 ಅಡಿ ಬಾಕಿ : 'ಚಿಕ್ಕಪೇಟೆಯಿಂದ ಮೆಜೆಸ್ಟಿಕ್ ತನಕ ಸುರಂಗ ಮಾರ್ಗ ಕೊರೆಯುವ ಕಾಮಗಾರಿ ಪ್ರಗತಿಯಲ್ಲಿದೆ. 'ಕಾವೇರಿ' ಮತ್ತು 'ಕೃಷ್ಣ' ಸುರಂಗ ಕೊರೆಯುತ್ತಿವೆ. 'ಕಾವೇರಿ' ಮೆಜೆಸ್ಟಿಕ್ನಿಂದ ಕೇವಲ 70 ಅಡಿ ದೂರದಲ್ಲಿದ್ದು, ಮೇ ಅಂತ್ಯದ ವೇಳೆಗೆ ಅದು ಮೆಜೆಸ್ಟಿಕ್ ತಲುಪುವ ನಿರೀಕ್ಷೆ ಇದೆ' ಎಂದು ಖರೋಲಾ ಹೇಳಿದರು.