ಫೆಬ್ರವರಿ 6ರಿಂದ ನಿಮ್ಮ ಮನೆಬಾಗಿಲಿಗೆ ಹಾಪ್ಕಾಮ್ಸ್ ಹಣ್ಣು, ತರಕಾರಿ
ಹಣ್ಣು ಅಥವಾ ತರಕಾರಿ ಖರೀದಿಸುವವರು ಹಾಪ್ ಕಾಮ್ಸ್ ನಿಂದ ಇನ್ನು ಮುಂದೆ ಆನ್ಲೈನ್ ಮೂಲಕ ಆರ್ಡರ್ ನೀಡಬಹುದಾಗಿದೆ.
ಬೆಂಗಳೂರು, ಫೆ 4: ತೋಟಗಾರಿಕೆ ಇಲಾಖೆ ಇದೇ ಬರುವ ಸೋಮವಾರದಿಂದ (ಫೆ 6) ಹೊಸ ಪ್ರಯತ್ನಕ್ಕೆ ಮುಂದಾಗಲಿದೆ. ಇಲಾಖೆಯ ಹಾಪ್ ಕಾಮ್ಸ್ (ತೋಟಗಾರಿಕೆ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ), ಆನ್ಲೈನ್ ಮೂಲಕ ಗ್ರಾಹಕರಿಗೆ ತನ್ನ ಸೇವೆಯನ್ನು ಆರಂಭಿಸಲಿದೆ.
ಐನೂರು ಮತ್ತು ಅದಕ್ಕಿಂತ ಮೇಲ್ಪಟ್ಟು ಹಣ್ಣು ಅಥವಾ ತರಕಾರಿ ಖರೀದಿಸುವವರು ಹಾಪ್ ಕಾಮ್ಸ್ ನಿಂದ ಇನ್ನು ಮುಂದೆ ಆನ್ಲೈನ್ ಮೂಲಕ ಆರ್ಡರ್ ನೀಡಬಹುದಾಗಿದೆ. 24 ಗಂಟೆಯೊಳಗೆ ಆರ್ಡರ್ ಮಾಡಿದ ಹಣ್ಣುಹಂಪಲುಗಳು ಮನೆಬಾಗಿಲಿಗೆ ತಲುಪಲಿದೆ.

ಈ ಸಂಬಂಧ ಖಾಸಗಿ ಸಂಸ್ಥೆಯ ಜೊತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೋಮವಾರ ಒಡಂಬಡಿಕೆಗೆ ಸಹಿಹಾಕಲಿದ್ದಾರೆ. ಗ್ರಾಹಕರು ಆರ್ಡರ್ ಮಾಡಿರುವ ಹಣ್ಣು ಮತ್ತು ತರಕಾರಿಗಳನ್ನು ಮನೆಬಾಗಿಲಿಗೆ ತಲುಪಿಸುವ ಹೊಣೆಯನ್ನು ಖಾಸಗಿ ಸಂಸ್ಥೆ ವಹಿಸಿಕೊಳ್ಳಲಿದೆ.
ದೈನಂದಿನ ಹಣ್ಣು ಮತ್ತು ತರಕಾರಿ ಬೆಲೆಗಳನ್ನು ಎಸ್ಎಂಎಸ್ ಮೂಲಕ (97319-79899) ಪಡೆದುಕೊಳ್ಳಬಹುದಾದ ಸೇವೆಯನ್ನು ಹಾಪ್ ಕಾಮ್ಸ್ ಈಗಾಗಲೇ ಆರಂಭಿಸಿದೆ.
ಜೊತೆಗೆ ತನ್ನ ವೆಬ್ ಸೈಟ್ ನಲ್ಲಿ 160ಕ್ಕೂ ಹೆಚ್ಚು ಹಣ್ಣು, ತರಕಾರಿಗಳ ಬೆಲೆಗಳನ್ನು ತನ್ನ ಅಂತರ್ಜಾಲದಲ್ಲಿ ದಿನಾ ಅಪ್ಡೇಟ್ ಮಾಡುತ್ತಿದ್ದೇವೆ ಎಂದು ಹಾಪ್ ಕಾಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಬಡಾವಣೆಗಳಲ್ಲಿ ಹಾಪ್ ಕಾಮ್ಸ್ ಮಳಿಗೆಗಳು ಇರುವುದರಿಂದ, ಗ್ರಾಹಕರಿಗೆ ಉತ್ತಮ ಮತ್ತು ಆಧುನಿಕ ಸ್ಪರ್ಷ ನೀಡುವ ಸೇವೆಯನ್ನು ಯಾವುದೇ ತೊಂದರೆಯಿಲ್ಲದೇ ನೀಡಲಿದ್ದೇವೆ ಎನ್ನುವುದು ಇಲಾಖೆಯ ಅಧಿಕಾರಿಗಳ ಭರವಸೆಯ ಮಾತು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications