ಭಾರತದ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನ - ದಲೈಲಾಮ
ಇನ್ನು ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹೆಸರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು, ಮೇ 23: ಭಾರತದ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವಾಗಿದೆ. ಈ ಸಂವಿಧಾನದಲ್ಲಿ ದಲಿತರು ಶಿಕ್ಷಣದ ಮೂಲಕ ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಬೌದ್ಧ ಧರ್ಮ ಗುರು ದಲೈಲಾಮ ಹೇಳಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ 'ಸಾಮಾಜಿಕ ನ್ಯಾಯ ಮತ್ತು ಡಾ. ಬಿ. ಆರ್. ಅಂಬೇಡ್ಕರ್' ರಾಷ್ಟ್ರೀಯ ವಿಚಾರ ಸಂಕಿರಣವನ್ನುದ್ದೇಶಿಸಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್
ಇನ್ನು ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹೆಸರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ 'ಸಾಮಾಜಿಕ ನ್ಯಾಯ ಮತ್ತು ಡಾ ಬಿ ಆರ್ ಅಂಬೇಡ್ಕರ್' ರಾಷ್ಟ್ರೀಯ ವಿಚಾರ ಸಂಕಿರಣದ ಅಂಗವಾಗಿ ಹೊರತಂದ ಹೊತ್ತಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗಣ್ಯರು ಬಿಡುಗಡೆಗೊಳಿಸಿದರು.
ಇನ್ನು ಕಾರ್ಯಕ್ರಮದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವರುಗಳಾದ ಹೆಚ್ ಆಂಜನೇಯ, ಡಾ ಎಚ್ ಸಿ ಮಹದೇವಪ್ಪ ಉಪಸ್ಥಿತರಿದ್ದರು.
ಇನ್ನು ರಾಷ್ಟ್ರೀಯ ವಿಚಾರ ಸಂಕಿರಣದ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನ ವಿಶೇಷವಾಗಿ ಸಿಂಗಾರಗೊಂಡಿತ್ತು. ಅಂಬೇಡ್ಕರ್ 125ನೇ ಜನ್ಮಾಚರಣೆ ವರ್ಷದ ಹಿನ್ನಲೆಯಲ್ಲಿ ಸಾಮಾಜ ಕಲ್ಯಾಣ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು.