ಐಟಿ ದಾಳಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಸಾಧ್ಯತೆ
ಬೆಂಗಳೂರು, ಜನವರಿ 24: ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟದಕ ರಾಜ್ಯಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಐಟಿ ದಾಳಿಯಾಗಿ 162 ಕೋಟಿಗೂ ಅಧಿಕ ಘೋಷಣೆಯಾಗದ ಅಕ್ರಮ ಹಣ ದೊರೆತಿರುವುದು ಕಾಂಗ್ರೆಸ್ಸಿಗೆ ತೀವ್ರ ತಲೆನೊವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಸಾಧ್ಯತೆಯಿದೆ ಎನ್ನಲಾಗಿದೆ.
ಜನವರಿ 19 ರಂದು ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ರವರ ಮನೆ ಮತ್ತು ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು, ಈ ವೇಳೆ ಅವರ ಮನೆಯಲ್ಲಿ ಘೋಷಣೆಯಾಗದ 162 ಕೋಟಿಗೂ ಅಧಿಕ ಹಣ ಮತ್ತು 12.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ಬಾರಿ ಮುಖಭಂಗವಾಗಿದ್ದು, ಜೊತೆಗೆ ವಿರೋಧ ಪಕ್ಷದಿಂದ ಒತ್ತಡ ಹೆಚ್ಚುತ್ತಿರುವ ಕಾರಣ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲೆ ಪ್ರಕರಣ ದಾಖಲಾಗಲಿದ್ದು, ನಂತರ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.[ಅಕ್ರಮ ಸಂಪತ್ತು ಮುಲಾಜಿಲ್ಲದೆ ವಶಪಡಿಸಿಕೊಳ್ಳಿ : ರಮೇಶ್ ಕುಮಾರ್]

ಅಲ್ಲದೆ ಪಕ್ಷದಲ್ಲಿ ರಮೇಶ್ ಜಾರಕಿಹೊಳಿ ಅಕ್ರಮ ಆಸ್ತಿ ಸಂಬಂಧ ಆರೋಗ್ಯ ಸಚಿವ ರಮೇಶ್ ಕುಮಾರ್ ಉಪ್ಪುತಿಂದವರು ನೀರು ಕುಡಿಯಲೇ ಬೇಕು. ಆಕ್ರಮವನ್ನು ಎಸಗಿದವರು ಯಾರೇ ಆಗಿದ್ದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಇದರಲ್ಲಿ ಪಕ್ಷಭೇದ ಮಾಡಬಾರದು ಎಂದು ಹೇಳಿದ್ದರು.[ಐಟಿ ದಾಳಿ: ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಸಿಕ್ಕ ಒಟ್ಟು ನಗದೆಷ್ಟು?]

ಇನ್ನು ಈ ಪ್ರಕರಣಕ್ಕೆ ಕುರಿತು ಕಾಂಗ್ರೆಸ್ಸಿನಲ್ಲಿಯೇ ಚರ್ಚೆ ನಡೆಯುತ್ತಿದೆ. ಅಲ್ಲದೆ ಈಗಾಗಲೇ ಶ್ರೀನಿವಾಸ ಪ್ರಸಾದ್ ರಾಜೀನಾಮೆ ನೀಡಿ ಪಕ್ಷ ಬದಲಿಸಿದ್ದಾರೆ. ಮೇಟಿಯವರು ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಮಹದೇವ್ ಪ್ರಸಾದ್ ನಿಧನ ಹೊಂದಿದ್ದು ರಮೇಶ್ ಜಾರಕಿಹೊಳಿ ಸಣ್ಣ ಕೈಗಾರಿಕೆ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಸಿದ್ದರಾಮಯ್ಯನವರಿಗೆ ಜವಾಬ್ದಾರಿ ಹೆಚ್ಚಲಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications