ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.24ರಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ

|
Google Oneindia Kannada News

ಬೆಂಗಳೂರು, ಡಿಸೆಂಬರ್ 22: ಕನ್ನಡ ಪುಸ್ತಕ ಪ್ರಾಧಿಕಾರವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಡಿಸೆಂಬರ್ 24ರಿಂದ 28ರವರೆಗೆ 'ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳ'ವನ್ನು ಹಮ್ಮಿಕೊಂಡಿದೆ. ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದು.

ಮಳಿಗೆಯೊಂದಕ್ಕೆ 1,000 ರುಪಾಯಿ ಬಾಡಿಗೆ, 1,000 ರುಪಾಯಿ ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು - ಇವರ ಹೆಸರಿನಲ್ಲಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಫಿಸುವ ಪ್ರಕಾಶಕರು/ಪ್ರದರ್ಶಕರು ನಿಗದಿತ ಅರ್ಜಿ ನಮೂನೆಯಲ್ಲಿ ಸಲ್ಲಿಸಬೇಕು.[8 ಭಾಷೆಯಲ್ಲಿ ನೀಟ್ ಪರೀಕ್ಷೆ, ಕನ್ನಡ ವಿದ್ಯಾರ್ಥಿಗಳಿಗೆ ಯಾಕೀ ಶಿಕ್ಷೆ?]

ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಪ್ರಾಧಿಕಾರದ ವೆಬ್ ಸೈಟ್ www.kannadapusthakapradhikara.com ನಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಡಿಸೆಂಬರ್ 23ರಂದು ಸಂಜೆ 4 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.

Kannada

ಆದ್ಯತೆ ಮೇಲೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು - 560 002 ದೂ: 080-22484516/2107704 ಅನ್ನು ಸಂಪರ್ಕಿಸಬಹುದು.[ಕನ್ನಡಕ್ಕಾಗಿ ಭಿಕ್ಷೆ ಬೇಡಬೇಕಿಲ್ಲ, ಬೊಬ್ಬೆ ಹೊಡೆಯಬೇಕಿಲ್ಲ]

ರಾಜ್ಯ ಮಟ್ಟದ ಕಿರುನಾಟಕ ಸ್ಪರ್ಧೆ ಬಹುಮಾನ ವಿತರಣೆ: ಕರ್ನಾಟಕ ಸರಕಾರ ಸಚಿವಾಲಯ ಕ್ಲಬ್ ವತಿಯಿಂದ ಡಿಸೆಂಬರ್ 24 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಕಬ್ಬನ್ ಉದ್ಯಾನದಲ್ಲಿರುವ ಕೆ.ಜಿ.ಎಸ್. ಕ್ಲಬ್ ನ ಬಿ.ಚನ್ನಬಸವಪ್ಪ ಸಭಾಂಗಣದಲ್ಲಿ ರಂಗ ಕಾರ್ತೀಕ- 2016ರ ರಾಜ್ಯ ಮಟ್ಟದ ಕಿರು ನಾಟಕ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಹಮ್ಮಿಕೊಂಡಿದೆ.

English summary
Kannada books discount sales from December 24th by Kannada pusthaka pradhikara in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X