ಇನ್ನು ಮುಂದೆ ಮೆಟ್ರೋ ಸಿಬ್ಬಂದಿಗಳು ಮುಷ್ಕರ ನಡೆಸುವಂತಿಲ್ಲ
ಬೆಂಗಳೂರು, ಜುಲೈ 7: 'ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ'ದ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾವುದೇ ರೀತಿ ಮುಷ್ಕರ ಹೂಡಿ ಕೆಲಸ ಸ್ಥಗಿತಗೊಳಿಸುವುದನ್ನು ನಿಷೇಧಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.
'ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-2013'ರ ಅನ್ವಯ ಸರಕಾರಕ್ಕಿರುವ ಅಧಿಕಾರವನ್ನು ಚಲಾಯಿಸಿ 'ಬೆಂಗಳೂರಿನ ನಾಗರಿಕರ ಹಿತದೃಷ್ಟಿಯಿಂದ' ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ಹೇಳಿದೆ.
ಏಕಾಏಕಿ 'ನಮ್ಮ ಮೆಟ್ರೋ' ಬಂದ್ ನಡೆಯುತ್ತಿರುವುದೇಕೆ?
ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಹಿದಾಯತ್ತುಲ್ಲ ಆದೇಶ ಹೊರಡಿಸಿದ್ದಾರೆ.
'ನಮ್ಮ ಮೆಟ್ರೋ' ಬಂದ್: ಲಕ್ಷಾಂತರ ಪ್ರಯಾಣಿಕರ ಗೋಳು ಕೇಳೋರ್ಯಾರು?!
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾವುದೇ ರೀತಿ ಮುಷ್ಕರ ಹೂಡಿ ಕೆಲಸ ಸ್ಥಗಿತಗೊಳಿಸುವುದನ್ನು ನಿಷೇಧಿಸಲಾಗಿದೆ 1/2 pic.twitter.com/RqhURbcpmf
— CM of Karnataka (@CMofKarnataka) July 7, 2017
ಇಂದು ಮುಂಜಾನೆ ಏಕಾಏಕಿ ಮೆಟ್ರೋ ಸಿಬ್ಬಂದಿಗಳು ಮುಷ್ಕರ ನಡೆಸಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಇದರಿಂದ ನಾಗರೀಕರು ಸರಕಾರದ ವಿರುದ್ಧ ಗರಂ ಆಗಿದ್ದರು.