ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶರತ್ ಮಡಿವಾಳ ಹತ್ಯೆ ಖಂಡಿಸಿ ಜು.12 ರಂದು ಬಿಜೆಪಿ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಜುಲೈ 12: ಬಂಟ್ವಾಳದಲ್ಲಿ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಅಪರಾಧಿಗಳನ್ನು ಹಿಡಿಯುವಲ್ಲಿ ತೋರುತ್ತಿರುವ ವಿಳಂಬ ಧೋರಣೆ ವಿರೋಧಿಸಿ ಬಿಜೆಪಿ ಮುಖಂಡರು ಇಂದು(ಜುಲೈ 12) ಪ್ರತಿಭಟನೆ ನಡೆಸಲಿದ್ದಾರೆ.

ಮಂಗಳೂರು: ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಸಾವುಮಂಗಳೂರು: ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಸಾವು

ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯ ಮೌರ್ಯ ಹೋಟೆಲ್ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ನೇತೃತ್ವವನ್ನು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ವಹಿಸಲಿದ್ದಾರೆ.

Karnataka State BJP will organised a protest in Bengaluru to oppose murder of RSS worker in Bantwal

ರಾಜ್ಯ ಕಾರ್ಯದರ್ಶಿಗಳಾದ ಎಂ.ಜಯದೇವ್, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ , ಶಾಸಕರಾದ ಎಸ್.ಮುನಿರಾಜು , ಜೊತೆಗೆ ಬೆಂಗಳೂರಿನ ಇತರ ಬಿಜೆಪಿ ಶಾಸಕರು, ಬಿಬಿಎಂಪಿ ಸದಸ್ಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಜುಲೈ 4ರಂದು ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಿಸದೆ ನಿನ್ನೆ(ಜು.7) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಮಂಗಳೂರಿನ ಬಿ.ಸಿ ರೋಡಿನಲ್ಲಿ ಈ ಘಟನೆ ನಡೆದಿತ್ತು.

English summary
Karnataka state BJP has organised a protest to condemn murder of RSS worker Sharat Madival in Bantwal. State BJP general secretary Shobha Karndlaje and former deputy chief minister of Karnataka R.Ashok will lead the protest, which will be started from 11 am on July 12th in Anandrao circle, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X