ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಮೂವರು ಸರಗಳ್ಳರು

By Ashwath
|
Google Oneindia Kannada News

ಬೆಂಗಳೂರು, ಜೂ.8: ಮಹಾದೇವಪುರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಸರಗಳ್ಳರು ಮತ್ತು ಒಬ್ಬ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ್ದಾರೆ.

ಉದಯನಗರದ ನಿವಾಸಿಗಳಾದ ಮಣಿ(24), ಸಲೀಂ(24), ರಾಜ (24) ಬಂಧಿತ ಆರೋಪಿಗಳು. ಬಂಧಿತರಿಂದ 35 ಗ್ರಾಂ ತೂಕದ 1 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ದ್ವಿಚಕ್ರ ವಾಹನ ಕಳ್ಳನ ಬಂಧನ: ಒಬ್ಬ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ, ಆತನ ವಶದಲ್ಲಿದ್ದ 9 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಲಹಂಕ ಜೋಸೆಫ್ ಅಲಿಯಾಸ್‌ ಕುಟ್ಟಿ(30) ಬಂಧಿತ ಆರೋಪಿ.

ಈತನು ಹೆಬ್ಬಾಳ, ಜೆ,ಬಿ. ನಗರ, ಮಹದೇವಪುರ, ಜಿಗಣಿ ಠಾಣಾ ವ್ಯಾಪ್ತಿಯಲ್ಲಿ ವಾಹನಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ 9 ಪ್ರಕರಣಗಳು ಪತ್ತೆಯಾಗಿದೆ ಎಂದು ಮಹಾದೇವಪುರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಗರ ಪೂರ್ವ ವಿಭಾಗದ ಉಪ ಪೊಲೀಸ್ ಕಮಿಷನರ್ ಎನ್.ಸತೀಶ್‍ಕುಮಾರ್ ಮಾರ್ಗದರ್ಶನದಲ್ಲಿ, ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ ಜಿ.ಬಿ ರವರ ನೇತೃತ್ವದಲ್ಲಿ ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ಜೆ.ಗೌತಮ್ ,ಪಿ.ಎಸ್.ಐಗಳಾದ ರೋಹಿತ್ ಸಿ.ಇ, ಮಂಜುನಾಥ್ ಎಸ್.ಆರ್, ನಾಗರಾಜ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

chain snatchers
English summary
Bangalore crime beat : Mahadevapura police have arrested three chain snatchers, one vehicle thief in two different incidents and have recovered Rs. 1 lakh worth jewelleries and 9 two wheelers respectively.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X