60 ಕೆರೆಗಳನ್ನು ಬಿಬಿಎಂಪಿಗೆ ವರ್ಗಾಯಿಸಿದ ಬಿಡಿಎ
ಬೆಂಗಳೂರು, ನವೆಂಬರ್ 23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ( ಬಿಡಿಎ) ಅರವತ್ತು ಕೆರೆಗಳನ್ನು ಹಣದ ಕೊರತೆ ಹಿನ್ನೆಲೆ ಬಿಬಿಎಂಪಿಗೆ ವರ್ಗಾಯಿಸಿದೆ.
ಈ ವರ್ಗವಾದ ಕೆರೆಗಳಲ್ಲಿ ಬೆಳಂದೂರು ಮತ್ತು ವರ್ತೂರು ಕೆರೆಗಳೂ ಸೇರಿವೆ.ಬೆಂಗಳೂರು ವಲಯಕ್ಕೆ ಸೇರುವ ಒಟ್ಟು 91 ಕೆರೆಗಳ ಅಭಿವೃದ್ದಿಗಾಗಿ ರು 2000 ಕೋಟಿಗೂ ಅಧಿಕ ಹಣ ವ್ಯಯವಾಗುತ್ತದೆ ಎಂಬ ಕಾರಣವನ್ನು ಬಿಡಿಎ ಹೇಳಿದೆ.

ವರದಿಯ ಪ್ರಕಾರ ನಾಲ್ಕು ವರ್ಷಗಳ ಹಿಂದೆ ಬಿಡಿಎಗೆ ಸೇರಿದ 117 ಕೆರೆಗಳಲ್ಲಿ 26 ಕೆರೆಗಳನ್ನು ಬಿಬಿಎಂಪಿಗೆ ವರ್ಗಾಯಿಸಲಾಗಿತ್ತು. ಈಗ ಉಳಿದ 91 ಕೆರೆಗಳಲ್ಲಿ 60 ಕೆರೆಗಳನ್ನು ಬಿಬಿಎಂಪಿಗೆ ಬಿಡಿಎ ವರ್ಗಾಯಿಸಿದೆ.[1000 ಕೋಟಿ ಮೌಲ್ಯದ 189 ಎಕರೆ ಭೂಮಿ ಒತ್ತುವರಿ ತೆರವು]
ಉಕ್ಕಿನ ಸೇತುವೆಯಂತಹ ದೊಡ್ಡ ಯೋಜನೆಗಳಿಗೆ ಕೈ ಹಾಕುವ ಬಿಡಿಎ ಕೆರೆಗಳ ನಿರ್ವಹಣೆಯಲ್ಲಿ ಹಿಂದೆ ಬೀಳುತ್ತಿರುವುದು ಸಾಮಾನ್ಯರ ಹುಬ್ಬೇರಿಸುವಂತೆ ಮಾಡಿದೆ.
ಬಿಡಿಎ ಅಧಿಕಾರಿಗಳು ಹೇಳುವ ಪ್ರಕಾರ ಅಪಾರ್ಟ್ ಮೆಂಟ್ ಗಳು, ಲೇಔಟ್ ಗಳನ್ನು ನಿರ್ಮಾಣ ಮಾಡವ ಅಭಿವೃದ್ಧಿ ಕಾರ್ಯದಲ್ಲಿ ಬಿಡಿಎ ತೊಡಗಿಕೊಂಡಿದೆ. ಹಾಗೆಯೇ ಉಕ್ಕಿನ ಸೇತುವೆ ಸಹ ಅದರಲ್ಲಿದೆ. ಆದರೆ ಕೆರೆಗಳ ನಿರ್ವಹಣೆ ಮಾಡುವುದು ಹೆಚ್ಚಿನ ಹೊರೆ ಜೊತೆಗೆ ಹೆಚ್ಚು ಹಣವೂ ಬೇಕಾಗಿರುವುದರಿಂದ ಬಿಬಿಎಂಪಿಗೆ ವರ್ಗಾವಣೆ ಮಾಡಿದೆ ಎಂದಿದ್ದಾರೆ.
ಇನ್ನು ಬಿಬಿಎಂಪಿಗೆ ಸರ್ಕಾರ ಕೊಡವ ಅನುದಾನದಲ್ಲೇ ಕೆರೆ ನಿರ್ವಹಣೆ, ಕರೆಂಟ್, ಕುಡಿಯುವ ನೀರು ಒದಗಿಸುವ ಅನೇಕ ಕೆಲಸಗಳನ್ನು ಮಾಡಬೇಕಿದೆ.
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ












Click it and Unblock the Notifications