ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೈಕೋರ್ಟ್ ಮೊರೆ ಹೋದ ಮಲ್ಲೇಶ್ವರಂ ಸ್ಫೋಟದ ಗಾಯಾಳು

|
Google Oneindia Kannada News

ಬೆಂಗಳೂರು, ಏ. 24 : ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಷಾ 1 ಕೋಟಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಶುಕ್ರವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಲಿಷಾ ಅವರು, 1 ಕೋಟಿ ರೂ. ಪರಿಹಾರ ಮತ್ತು ವಿಕಲಚೇತನ ಕೋಟಾದಡಿ ಸರ್ಕಾರಿ ಉದ್ಯೋಗ ನೀಡಬೇಕು. ಮುಂದಿನ ವೈದ್ಯಕೀಯ ವೆಚ್ಚ ಭರಿಸಬೇಕು. ಭಯೋತ್ಪಾದಕ ದಾಳಿಗೆ ತುತ್ತಾದವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. [ಮಲ್ಲೇಶ್ವರಂ ಸ್ಫೋಟ : ಗಾಯಾಳುವಿಗೆ ಸಿಎಂ ಪರಿಹಾರ]

Malleswaram blast

ಸರ್ಕಾರಿ ಉದ್ಯೋಗ ಮತ್ತು ಪರಿಹಾರ ನೀಡುವ ಕುರಿತು ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ನೀತಿ ರೂಪಿಸುವ ಕುರಿತು ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಾಗಿದೆ. ಆದ್ದರಿಂದ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿದೆ. [ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲೇ ಸಿಇಟಿ]

2013ರ ಏ.17ರಂದು ಬೆಳಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಈ ಸಂದರ್ಭದಲ್ಲಿ ಕಾಲೇಜಿಗೆ ಹೋಗುತ್ತಿದ್ದ ಲಿಷಾ ಗಾಯಗೊಂಡಿದ್ದರು. ಕಬ್ಬಿಣದ ಚೂರುಗಳು ಅವರ ಎಡಗಾಲಿಗೆ ಹೊಕ್ಕಿತ್ತು. ಇದುವರೆಗೂ ಅವರು ಸುಮಾರು 7 ಲಕ್ಷ ರೂ.ಗಳನ್ನು ಶಸ್ತ್ರ ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಆದರೆ, ಇನ್ನೂ ಗುಣಮುಖರಾಗಿಲ್ಲ.

ಈ ಹಿನ್ನಲೆಯಲ್ಲಿ 1 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ಕೊಡಿ ಎಂದು ಕೋರ್ಟ್‌ ಮೊರೆ ಹೋಗಿದ್ದಾರೆ. ಭಯೋತ್ಪಾದಕ ದಾಳಿಯಿಂದ ಗಾಯಗೊಂಡವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿ ಅಗತ್ಯವಿದೆ ಎಂದು ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

English summary
Lisha who injured in 2013, April 17th Malleswaram bomb blast near the BJP office moved to high court on Friday for 1 core composition and job under reservation category.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X