ಹೈಕೋರ್ಟ್ ಮೊರೆ ಹೋದ ಮಲ್ಲೇಶ್ವರಂ ಸ್ಫೋಟದ ಗಾಯಾಳು
ಬೆಂಗಳೂರು, ಏ. 24 : ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಷಾ 1 ಕೋಟಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಶುಕ್ರವಾರ
ಹೈಕೋರ್ಟ್ಗೆ
ಅರ್ಜಿ
ಸಲ್ಲಿಸಿರುವ
ಲಿಷಾ
ಅವರು,
1
ಕೋಟಿ
ರೂ.
ಪರಿಹಾರ
ಮತ್ತು
ವಿಕಲಚೇತನ
ಕೋಟಾದಡಿ
ಸರ್ಕಾರಿ
ಉದ್ಯೋಗ
ನೀಡಬೇಕು.
ಮುಂದಿನ
ವೈದ್ಯಕೀಯ
ವೆಚ್ಚ
ಭರಿಸಬೇಕು.
ಭಯೋತ್ಪಾದಕ
ದಾಳಿಗೆ
ತುತ್ತಾದವರಿಗೆ
ಪರಿಹಾರ
ನೀಡಲು
ರಾಷ್ಟ್ರೀಯ
ನೀತಿ
ರೂಪಿಸಬೇಕು
ಎಂದು
ಅರ್ಜಿಯಲ್ಲಿ
ಮನವಿ
ಮಾಡಿದ್ದಾರೆ.
[ಮಲ್ಲೇಶ್ವರಂ
ಸ್ಫೋಟ
:
ಗಾಯಾಳುವಿಗೆ
ಸಿಎಂ
ಪರಿಹಾರ]
ಸರ್ಕಾರಿ ಉದ್ಯೋಗ ಮತ್ತು ಪರಿಹಾರ ನೀಡುವ ಕುರಿತು ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ನೀತಿ ರೂಪಿಸುವ ಕುರಿತು ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಾಗಿದೆ. ಆದ್ದರಿಂದ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿದೆ. [ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲೇ ಸಿಇಟಿ]
2013ರ ಏ.17ರಂದು ಬೆಳಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಈ ಸಂದರ್ಭದಲ್ಲಿ ಕಾಲೇಜಿಗೆ ಹೋಗುತ್ತಿದ್ದ ಲಿಷಾ ಗಾಯಗೊಂಡಿದ್ದರು. ಕಬ್ಬಿಣದ ಚೂರುಗಳು ಅವರ ಎಡಗಾಲಿಗೆ ಹೊಕ್ಕಿತ್ತು. ಇದುವರೆಗೂ ಅವರು ಸುಮಾರು 7 ಲಕ್ಷ ರೂ.ಗಳನ್ನು ಶಸ್ತ್ರ ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಆದರೆ, ಇನ್ನೂ ಗುಣಮುಖರಾಗಿಲ್ಲ.
ಈ ಹಿನ್ನಲೆಯಲ್ಲಿ 1 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ಕೊಡಿ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಭಯೋತ್ಪಾದಕ ದಾಳಿಯಿಂದ ಗಾಯಗೊಂಡವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿ ಅಗತ್ಯವಿದೆ ಎಂದು ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.