ಗೌರವ ಡಾಕ್ಟರೇಟ್ ನಿರಾಕರಿಸಿದ ರಾಹುಲ್ ದ್ರಾವಿಡ್
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಬೆಂಗಳೂರು ವಿಶ್ವವಿದ್ಯಾಲಯದ 2017ನೇ ಸಾಲಿನ ಗೌರವ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ್ದಾರೆ.
ಬೆಂಗಳೂರು, ಜನವರಿ 25: ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಬೆಂಗಳೂರು ವಿಶ್ವವಿದ್ಯಾಲಯದ 2017ನೇ ಸಾಲಿನ ಗೌರವ ಡಾಕ್ಟರೇಟ್ ನ್ನು ನಯವಾಗಿ ತಿರಸ್ಕರಿಸಿದ್ದಾರೆ.
ಈ ಕುರಿತು ಉಪ ಕುಲಪತಿ ತಿಮ್ಮೇಗೌಡರಿಗೆ ರಾಹುಲ್ ದ್ರಾವಿಡ್ ಈ-ಮೇಲ್ ಮಾಡಿ 'ಪಿಎಚ್ಡಿ ಪದವಿ ಮುಗಿಸಿ ಡಾಕ್ಟರೇಟ್ ಪದವಿ ಪಡೆಯುವುದು ಸೂಕ್ತ ಎನ್ನುವ ಕಾರಣಕ್ಕಾಗಿ ಡಾಕ್ಟರೇಟ್ ನಿರಾಕರಿಸುತ್ತಿದ್ದೇನೆ' ಎಂದು ಹೇಳಿದ್ದಾರೆ. ಮಂಗಳವಾರವಷ್ಟೆ ದ್ರಾವಿಡ್ ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿತ್ತು. [ರಾಹುಲ್ ದ್ರಾವಿಡ್ ಗೆ ಎರಡನೇ ಬಾರಿಗೆ ಗೌರವ ಡಾಕ್ಟರೇಟ್]

2014ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯವು ರಾಹುಲ್ ದ್ರಾವಿಡ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಬೆಂಗಳೂರು ವಿಶ್ವವಿದ್ಯಾಲಯ ನಿಡಿದ ಡಾಕ್ಟರೇಟನ್ನು ದ್ರಾವಿಡ್ ತಿರಸ್ಕರಿಸಿದ್ದಾರೆ. ಒಂದೊಮ್ಮೆ ದ್ರಾವಿಡ್ ಡಾಕ್ಟರೇಟ್ ಪಡೆದಿದ್ದಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆಯುತ್ತಿರುವ ಎರಡನೇ ಕ್ರಿಕೆಟರ್ ಎನಿಸಿಕೊಳ್ಳುತ್ತಿದ್ದರು. ಈ ಹಿಂದೆ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ಅವರನ್ನು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು.

ದ್ರಾವಿಡ್ :ಇಂದೋರ್ ನಲ್ಲಿ ಜನವರಿ 11ರಂದು ಜನಿಸಿದ ರಾಹುಲ್ ದ್ರಾವಿಡ್ ಅವರು ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ. ಅದೇ ಕಾಲೇಜಿನಲ್ಲಿ ಎಂಬಿಎ ಓದುವಾಗ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದರು. ಕ್ರಿಕೆಟ್ ಜಗತ್ತಿನಲ್ಲಿ 'ದಿ ವಾಲ್' ಎಂದು ಹೆಮ್ಮೆಯಿಂದ ಎಲ್ಲರೂ ಗುರುತಿಸುತ್ತಾರೆ.
2012ರಲ್ಲಿ ನಿವೃತ್ತಿ ಹೊಂದಿದ ಬಳಿಕ ಯುವ ಕ್ರಿಕೆಟರ್ ಗಳಿಗೆ ತರಬೇತಿ ನೀಡುತ್ತಿದ್ದಾರೆ. ಸದ್ಯ ಭಾರತ ಎ ತಂಡ ಕೋಚ್ ಆಗಿದ್ದಾರೆ.
ರಾಹುಲ್ ದ್ರಾವಿಡ್ ಅವರ ತಾಯಿ ಪುಷ್ಪಾ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ












Click it and Unblock the Notifications