ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

5 ಎಕರೆಗಿಂತ ಹೆಚ್ಚಿನ ಭೂ ಒತ್ತುವರಿ ತೆರವಿಗೆ ಆದ್ಯತೆ ನೀಡಿ

By Kiran B Hegde
|
Google Oneindia Kannada News

ಬೆಂಗಳೂರು, ನ. 21: ರಾಜ್ಯದಲ್ಲಿ ಐದು ಎಕರೆಗಿಂತ ಹೆಚ್ಚು ಒತ್ತುವರಿಗೊಂಡ ಭೂಮಿ ತೆರವಿಗೆ ಆದ್ಯತೆ ನೀಡಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. [ಭೂ ಒತ್ತುವರಿ ತೆರವು ಮಾಡಿ: ಆಪ್ ಪತ್ರ]

ನಮ್ಮ ಬೆಂಗಳೂರು ಪ್ರತಿಷ್ಠಾನವು ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾ. ಡಿ.ಎಚ್ ವಘೇಲಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. [ಒತ್ತುವರಿ: ವರದಿ ಕೇಳಿದ ರಾಜ್ಯಪಾಲ]

court

ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳುವಾಗ ಐದು ಎಕರೆಗಿಂತ ಹೆಚ್ಚು ವಿಸ್ತೀರ್ಣದ ಭೂಮಿಗೆ ಆದ್ಯತೆ ನೀಡಬೇಕು. ಕರ್ನಾಟಕ ರಾಜ್ಯ ಸಾರ್ವಜನಿಕ ಜಮೀನು (ಕೆಪಿಎಲ್‌ಸಿ) ಗಳ ಒತ್ತುವರಿ ತೆರವು ನಡೆಸಿದ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. [ಭೂ ಇಕ್ಕಟ್ಟಿನಲ್ಲಿ ದಿನೇಶ್ ಗುಂಡೂರಾವ್]

ಒತ್ತುವರಿ ಆಗಿರುವ ಸರ್ಕಾರಿ ಭೂಮಿ ತೆರವುಗೊಳಿಸಲು ಸರ್ಕಾರ ಸೂಚಿಸಬೇಕು. ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ಅವರ ವರದಿ ಜಾರಿಗೊಳಿಸಬೇಕೆಂದು ಕೋರಿ ನಮ್ಮ ಬೆಂಗಳೂರು ಪ್ರತಿಷ್ಠಾನವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು. [ದಿನೇಶ್ ರಾಜೀನಾಮೆಗೆ ಬಿಜೆಪಿ ಪಟ್ಟು]

English summary
Karnataka high court ordered government to give preference in encroachment removal operations to the land which is more than 5 acres in Karnataka. Reports of encroachment removal should be submitted high court told in order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X