ನಿರ್ವಹಣಾ ಮಂಡಳಿಗೆ ಸದಸ್ಯರ ನೇಮಕವಿಲ್ಲ: ಸರ್ವಪಕ್ಷ ಸಭೆ ನಿರ್ಣಯ
ಬೆಂಗಳೂರು, ಅಕ್ಟೋಬರ್ 01: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪಾಲಿಸುವುದರ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿಗೆ ಸದಸ್ಯರ ನೇಮಕ ಮಾಡದಿರಲು ಒಕ್ಕೊರಲ ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯಗಳು:
* ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ, ಮಂಡಳಿಗೆ ಸದಸ್ಯರ ಹೆಸರುಗಳನ್ನು ಸೂಚಿಸದಿರಲು ನಿರ್ಣಯ.
* ಸುಪ್ರೀಂಕೋರ್ಟ್ ನೀಡಿರುವ ಎರಡು ನಿರ್ಣಯಗಳನ್ನು ಬದಲಾಯಿಸಲು ಕೋರಿ ಮನವಿ
* ತಮಿಳುನಾಡಿಗೆ ನೀರು ಬಿಡದಂತೆ ಸಿದ್ದರಾಮಯ್ಯ ಅವರಿಗೆ ಸರ್ವಪಕ್ಷಸಭೆಯಲ್ಲಿ ಸಲಹೆ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಡಿವಿ ಸದಾನಂದ ಗೌಡ, ರಮೇಶ್ ಜಿಗಜಿಣಗಿ, ಸಂಸದರಾದ ಶೋಭಾ ಕರಂದ್ಲಾಜೆ, ಸಚಿವ ಸಂಪುಟ ಸದಸ್ಯರಾದ ಜಿ ಪರಮೇಶ್ವರ್, ಕಾಗೋಡು ತಿಮ್ಮಪ್ಪ ಸೇರಿದಂತೆ ಬಹುತೇಕ ಎಲ್ಲಾ ಜನಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. [ಸುಪ್ರೀಂನ ಎರಡು ಆದೇಶ ಬದಲಾಯಿಸಲು ಕರ್ನಾಟಕದಿಂದ ಮನವಿ]

ನೀರಲು ಬಿಡಲು ಸಾಧ್ಯವಿಲ್ಲ ಎಂದು ಸರ್ಕಾರ ತನ್ನ ನಿಲುವನ್ನು ಆರಂಭದಲ್ಲೇ ಪ್ರಕಟಿಸಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಲ್ಕು ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿ ಎಂದಿದ್ದ ಸುಪ್ರೀಂಕೋರ್ಟ್ ತನ್ನ ಆದೇಶ ಬದಲಿಸಿ ತ್ವರಿತವಾಗಿ ಮಂಡಳಿ ರಚನೆಗೆ ಆದೇಶಿಸಿದೆ.
ಸುಪ್ರೀಂ ಆದೇಶಕ್ಕೆ ಕೇಂದ್ರ ಸರ್ಕಾರ ಕೂಡಾ ತಲೆ ಬಾಗಿದೆ. ಅಕ್ಟೋಬರ್ 01ರಿಂದ ಅಕ್ಟೋಬರ್ 06ರ ತನಕ ಪ್ರತಿ ದಿನ 6,000 ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕಕ್ಕೆಸೂಚಿಸಿದೆ. ಈ ಎರಡು ವಿಷಯದ ಬಗ್ಗೆ ಕಾನೂನಿನ ಹೋರಾಟ ಹಾಗೂ ಶಾಸಕಾಂಗ ಯಾವ ರೀತಿ ಕ್ರಮ ಜರುಗಿಸಬೇಕು ಎಂಬುದನ್ನು ಚರ್ಚಿಸಲಾಗುತ್ತಿದೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications