ಸತ್ಯಾಂಶ ತಿಳಿಯಲು ತನಿಖೆ ನಡೆಸಲಿ : ರೂಪಾ ತಿರುಗೇಟು
ಬೆಂಗಳೂರು, ಜುಲೈ 13 : "ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ದೌರ್ಜನ್ಯ, ಭ್ರಷ್ಟಾಚಾರ, ವೈದ್ಯಾಧಿಕಾರಿಗಳ ಮೇಲೆ ನಡೆಯುತ್ತಿರುವ ಹಲ್ಲೆಗಳ ಆರೋಪ ಸತ್ಯವಾಗಿದೆ. ಅಲ್ಲೇನು ನಡೆಯುತ್ತಿದೆ ಎಂಬುದರ ಬಗ್ಗೆ ತನಿಖೆಯಾಗಲಿ" ಎಂದು ಡಿಐಜಿ (ಕಾರಾಗೃಹ) ರೂಪಾ ಡಿ ಮೌದ್ಗಿಲ್ ಅವರು ಸವಾಲು ಹಾಕಿದ್ದಾರೆ.
ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಮತ್ತು ನಕಲಿ ಸ್ಟಾಂಪ್ ಹಗರಣದಲ್ಲಿ ಭಾಗಿಯಾಗಿರುವ ಕರೀ ಲಾಲಾ ತೆಲಗಿ ಅವರಿಗೆ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ನೀಡಲಾಗಿದೆ, ಅಲ್ಲದೆ ಶಶಿಕಲಾ ಅವರಿಂದ 2 ಕೋಟಿ ರುಪಾಯಿ ಲಂಚ ಪಡೆಯಲಾಗಿದೆ ಎಂದು ರೂಪಾ ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಎಲ್ಲ ಆರೋಪಗಳನ್ನು ನಿರಾಕರಿಸಿರುವ ಡಿಜಿಪಿ ಎಚ್ಎನ್ ಸತ್ಯನಾರಾಯಣ ರಾವ್ ಅವರು, ರೂಪಾ ವಿರುದ್ಧ ತಿರುಗಿಬಿದ್ದಿದ್ದು, ನಾನು ಯಾವುದೇ ವಿಶೇಷ ಸವಲತ್ತುಗಳನ್ನು ಶಶಿಕಲಾಗೆ ನೀಡಿಲ್ಲ ಮತ್ತು ಇದಕ್ಕಾಗಿ ಲಂಚ ಪಡೆದಿಲ್ಲ. ಇಂಥ ವಿಷಯ ತಿಳಿದುಬಂದಿದ್ದರೆ ನನ್ನ ಜೊತೆ ಮೌಖಿಕವಾಗಿ ಚರ್ಚೆ ಮಾಡಬಹುದಿತ್ತು. ಪತ್ರವನ್ನು ಮಾಧ್ಯಮಕ್ಕೆ ಬಹಿರಂಗ ಮಾಡುವ ಅಗತ್ಯವೇನಿತ್ತು ಎಂದು ಸತ್ಯನಾರಾಯಣ ಅವರು ಕೆಂಡ ಕಾರಿದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ರೂಪಾ ಮೌದ್ಗಿಲ್ ಅವರು, ನಾನು ಈ ವಿಷಯ ಕುರಿತು ಅವರೊಂದಿಗೆ ಮೌಖಿಕವಾಗಿಯೂ ಚರ್ಚಿಸಿದ್ದೇನೆ. ಈಗ ಬರೀ ಮಾತಿನಲ್ಲಿ ಚರ್ಚಿಸಿದರೆ ಪ್ರಯೋಜನವಿಲ್ಲವೆಂದು ಲಿಖಿತ ರೂಪದಲ್ಲಿ ತಿಳಿಸಿದ್ದೇನೆ, ಸರಕಾರದ ಗಮನಕ್ಕೂ ತಂದಿದ್ದೇನೆ. ನನ್ನ ಆರೋಪದಲ್ಲಿ ಸತ್ಯಾಂಶವಿದೆ ಎಂದು ಅನ್ನಿಸಿದರೆ ಸರಕಾರವೇ ತನಿಖೆ ನಡೆಸಿ ಹಗರಣ ಬಯಲಿಗೆಳೆಯಲಿ ಎಂದು ತಿರುಗೇಟು ನೀಡಿದರು.
ಜೈಲಿನಲ್ಲಿ ಬೇಕರಿ ತರಬೇತಿ ನೀಡುವುದಾಗಲಿ ಮತ್ತೊಂದು ಉಪಯುಕ್ತ ಕೆಲಸ ನಡೆಯುವಾಗ ನಾನೇ ಮಾಧ್ಯಮಗಳ ಗಮನಕ್ಕೆ ತಂದಿದ್ದೇನೆ. ಆದರೆ, ಭ್ರಷ್ಟಾಚಾರಗಳು ನಡೆಯುತ್ತಿರುವಾಗ ಸುಮ್ಮನೆ ಕೂಡಲು ಸಾಧ್ಯವಿಲ್ಲ. ಕಣ್ಣಮುಂದೆಯೇ ಎಲ್ಲ ನಡೆಯುತ್ತಿರುವಾಗ ಕಣ್ಣು ಮುಚ್ಚಿ ಕೂಡಲು ಸಾಧ್ಯವಿಲ್ಲ. ಅದು ನನ್ನ ಕರ್ತವ್ಯಲೋಪವಾಗುತ್ತದೆ. ಹೀಗಾಗಿ ನಾನು ವರದಿ ಕಳಿಸಲೇಬೇಕಾಯಿತು ಎಂದು ರೂಪಾ ನುಡಿದರು.
ಶಶಿಕಲಾ ಅವರಿಗೆ ವಿಶೇಷ ಅಡುಗೆ ಕೋಣೆ ನೀಡಲಾಗಿದೆ ಮತ್ತು ಅದಕ್ಕಾಗಿ ಲಂಚ ಪಡೆಯಲಾಗಿದೆ ಎಂಬ ಆರೋಪ ಕುರಿತಂತೆ ಸತ್ಯಾಂಶವೇನಿದೆ ಎಂದು ತಿಳಿಯಲು ಸರಕಾರ ತನಿಖೆ ನಡೆಸಲೇಬೇಕು ಎಂದು ರೂಪಾ ಅವರು ವಾದಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications