ಆಗ್ನೇಯ ಶಿಕ್ಷಕರ ಕ್ಷೇತ್ರ ಉಪಚುನಾವಣೆ: ಫೆ.3 ರಂದು ರಜೆ
ಬೆಂಗಳೂರು, ಫೆಬ್ರವರಿ 1: ರಾಜ್ಯ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರ ಉಪಚುನಾವಣೆಯು ಫೆಬ್ರವರಿ 3ರಂದು ಜರುಗಲಿದ್ದು, ಮತದಾನ ಪ್ರಕ್ರಿಯೆ ಸಂಬಂಧ ಕೆಲವು ಜಿಲ್ಲೆಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಸರಕಾರ ಮಂಜೂರು ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಫೆಬ್ರವರಿ 3ರಂದು ನಡೆಯುವ ಉಪಚುನಾವಣೆ ಕುರಿತು ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ವಿಶೇಷ ಸಾಂದರ್ಭಿಕ ರಜೆ ಸರಕಾರ ಮಂಜೂರು ಮಾಡಿದೆ. ಮತದಾನ ಸಂಬಂಧ ಶಿಕ್ಷಕರಿಗೆ ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ನಿಗೋಷಿಯೇಬಲ್ ಇನ್ಸ್ಟ್ರುಮೆಂಟ್ ಕಾಯ್ದೆ ಪ್ರಕಾರ ವಿಶೇಷ ಸಾಂದರ್ಭಿಕ ರಜೆಯನ್ನು 5 ಜಿಲ್ಲೆಗಳಿಗೆ ಸೀಮಿತಗೊಳಿಸಲಾಗಿದೆ.[ಈಶಾನ್ಯ ಶಿಕ್ಷಕರ ಕ್ಷೇತ್ರ ಕೈವಶ, ಮಟ್ಟೂರರಿಗೆ ಗೆಲುವು]

ಈ ರಜೆಯು ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳ ಸರಕಾರಿ, ಖಾಸಗಿ, ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆ ಹಾಗು ವಿಶ್ವ ವಿದ್ಯಾನಿಲಯಗಳಲ್ಲಿ ಸೇವೆಸಲ್ಲಿಸುತ್ತಿರುವ ಶಿಕ್ಷಕ ಮತದಾರರಿಗೆ ಅನ್ವಯವಾಗುತ್ತದೆ.
ಕಾಲೇಜುಗಳು ಎಂದಿನಂತೆ ನಡೆಯಲಿವೆಯೋ ಅಥವಾ ಇಲ್ಲವೋ ಎಂಬುದು ಅನುಮಾನ ಉಪನ್ಯಾಸಕರಿದ್ದೂ ಬಂಕ್ ಹಾಕುವ ವಿದ್ಯಾರ್ಥಿಗಳಿರುವಾಗ, ಉಪನ್ಯಾಸಕರಿಲ್ಲದೇ ಕಾಲೇಜಿಗೆ ಹೇಗೆ ಬಂದಾರು ಎಂದು ಪೋಷಕರು ಮಾತನಾಡಿಕೊಳ್ಳುತ್ತಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications