ಬೆಂಗಳೂರಿನಲ್ಲಿಂದು 'ಮೂರು ತಲೆಮಾರುಗಳ ಮಿಲನ' ಕಾರ್ಯಕ್ರಮ
ಬನಶಂಕರಿಯ ಹಿರಿಯ ನಾಗರಿಕರ ವೇದಿಕೆಯಿಂದ ವಿಶಿಷ್ಠವಾದ ಕಾರ್ಯಕ್ರಮ
ಬೆಂಗಳೂರು, ಜನವರಿ 21: ನಗರದ ಬನಶಂಕರಿಯ 2ನೇ ಹಂತದಲ್ಲಿರುವ ಜ್ಞಾನಜ್ಯೋತಿ ಹಿರಿಯ ನಾಗರಿಕರ ವೇದಿಕೆ ವತಿಯಿಂದ ಜನವರಿ 21ರ ಶನಿವಾರದಂದು ಮಧ್ಯಾಹ್ನ 3: 45ಕ್ಕೆ 'ಸದಸ್ಯರ ಮೂರು ತಲೆಮಾರುಗಳ ಮಿಲನ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವು ಬನಶಂಕರಿ ಎರಡನೇ ಹಂತದಲ್ಲಿರುವ ಪ್ರತಿಭಾ ಬಾಲಮಂದಿರದ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅನೇಕ ರೀತಿಯ ತಯಾರಿಯನ್ನು ಮಾಡಿಕೊಂಡಿರುವುದಾಗಿ ಆಯೋಜಕರು ತಿಳಿಸಿದ್ದಾರೆ.
ಆಸಕ್ತ ಪ್ರೇಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವೇದಿಕೆಯ ಅಧ್ಯಕ್ಷರು ಮನವಿ ಮಾಡಿದ್ದಾರೆ.
ಅಂದಹಾಗೆ, ಕಾರ್ಯಕ್ರಮ ಎರಡು ಕಡೆ ನಡೆಯಲಿದೆ. ಮೊದಲ ಕಾರ್ಯಕ್ರಮವು ಮೇಲಿನ ಮಾಹಿತಿಯಂತೆ ಮಧ್ಯಾಹ್ನ 3:45ಕ್ಕೆ ಅದೇ ಸ್ಥಳದಲ್ಲೇ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಗೋಪಾಲಕೃಷ್ಣ ರಾಮಸ್ವಾಮಿ ಅವರನ್ನು (9341073994) ಸಂಪರ್ಕಿಸಬಹುದು.
ಅಂತೆಯೇ, ಸಂಜೆ 6 ಗಂಟೆಗೆ ಜಯನಗರ 4ನೇ ಬ್ಲಾಕ್ ನಲ್ಲಿರುವ ರಾಷ್ಟ್ರೋತ್ಥಾನ ಶಾರೀರಿಕ ಕೇಂದ್ರದ ಜಯನಗರ ಸ್ಟಡಿ ಸೆಂಟರ್ ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬಯಸುವವರು ಬಿಎಸ್ ನಾರಾಯಣ್ (9986661281) ಅವರನ್ನು ಸಂಪರ್ಕಿಸಬಹುದು.