ಬೆಂಗಳೂರಿನಲ್ಲಿ ಯುವಕನ ನಾಲಗೆ ಕತ್ತರಿಸಿದ ದುಷ್ಕರ್ಮಿಗಳು
ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ಒಡಿಶಾ ಮೂಲದ ಯವಕನೊಬ್ಬನನ್ನು ಥಳಿಸಿದ ದುಷ್ಕರ್ಮಿಗಳು, ಆತನ ನಾಲಗೆಯನ್ನು ಕತ್ತರಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ
ಬೆಂಗಳೂರು, ಮಾರ್ಚ್ 18: ಒಡಿಶಾ ಮೂಲದ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ, ನಾಲಗೆ ಕತ್ತರಿಸಿದ ಘಟನೆ ಶುಕ್ರವಾರ ರಾತ್ರಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಒಡಿಶಾ ಮೂಲದ ಬಿಜು ನಾಯಕ್ (20) ಎಂಬಾತನ ನಾಲಗೆಯನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಆತನ ಮನೆಯಿಂದ ಕರೆದುಕೊಂಡು ಬಂದು ಮೊದಲಿಗೆ ಹಲ್ಲೆ ನಡೆಸಿ, ಆ ನಂತರ ಈ ದುಷ್ಕೃತ್ಯ ಎಸಗಿದ್ದಾರೆ. ಆ ಯುವಕನಿಗೆ ಸ್ಥಳೀಯವಾಗಿ ಪರಿಚಯವಿಲ್ಲದ ಕಾರಣ ರಾತ್ರಿಯಿಡೀ ನರಳಾಡಿದ್ದಾನೆ.[ಮೈಸೂರಿನಲ್ಲಿ ಅಜ್ಜಿ-ತಾತನ ಕೊಲ್ಲಲು ಮನೆಗೆ ಬೆಂಕಿಯಿಟ್ಟ ಮೊಮ್ಮಗಳು!]
ಆ ಮೇಲೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಸಿಪಿ ನಾರಾಯಣ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗಾಗಿ ಸೂಚನೆ ನೀಡಿದ್ದಾರೆ. ಈ ಘಟನೆ ಬಗ್ಗೆ ತನಿಖೆ ಮುಂದುವರಿದಿದ್ದು, ಹೀಗೆ ಮಾಡುವುದಕ್ಕೆ ಕಾರಣ ಏನು ಮತ್ತು ಏಕಾಗಿ ಮಾಡಿದರು ಎಂಬುದು ಸದ್ಯದ ಪ್ರಶ್ನೆಯಾಗಿದೆ. ತಪ್ಪಿತಸ್ಥರ ಶೀಘ್ರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.