ಬೆಳಗಾವಿ ಅಧಿವೇಶನ, ಮೊದಲ ದಿನ ಪ್ರತಿಭಟನೆಯ ಬಿಸಿ
ಬೆಳಗಾವಿ, ಜೂ. 29 : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ. ಸೋಮವಾರದಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಇಂದು ಸಾಲು-ಸಾಲು ಪ್ರತಿಭಟನೆಗಳಿಗೆ ಬೆಳಗಾವಿ ಸಾಕ್ಷಿಯಾಗಲಿದೆ.
ಬೆಳಗಾವಿಯಲ್ಲಿ
ನಡೆಯುತ್ತಿರುವ
6ನೇ
ವಿಧಾನಮಂಡಲ
ಅಧಿವೇಶನವಿದಾಗಿದ್ದು,
ಈ
ಬಾರಿಯೂ
ಕಬ್ಬು
ಬೆಳೆಗಾರರ
ಸಮಸ್ಯೆ
ಚರ್ಚೆಯ
ಕೇಂದ್ರಬಿಂದುವಾಗಲಿದೆ.
ಕಬ್ಬು
ಬೆಳೆಗಾರರು
ಈ
ಬಾರಿಯೂ
ಸುವರ್ಣಸೌಧದ
ಮುಂದೆ
ನಿರಂತರ
ಪ್ರತಿಭಟನೆ
ನಡೆಸುವ
ಘೋಷಣೆ
ಮಾಡಿದ್ದಾರೆ.
[ಹೋರಾಟಕ್ಕೆ
ಸಜ್ಜಾದ
ಕಬ್ಬು
ಬೆಳೆಗಾರರು]
ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪಗಳು ಆರಂಭವಾಗಲಿವೆ. ಕಬ್ಬು ಬೆಳಗಾರರ ಬಾಕಿ ಪಾವತಿ, ರಾಜ್ಯದಲ್ಲಿನ ರೈತರ ಸರಣಿ ಆತ್ಮಹತ್ಯೆ ವಿಚಾರಗಳ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. [ದಯವಿಟ್ಟು ಆತ್ಮಹತ್ಯೆಗೆ ಶರಣಾಗಬೇಡಿ : ರೈತರಿಗೆ ಸಿದ್ದು ಮನವಿ]
ಪ್ರತಿಪಕ್ಷ ಬಿಜೆಪಿ ಕೊಪ್ಪಳ ಜಿಲ್ಲೆಯಲ್ಲಿ ನಡೆದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರ ರಾಜೀನಾಮೆಗೆ ಒತ್ತಾಯಿಸಲಿದೆ. ಹತ್ತು ದಿನಗಳ ಕಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ಸಜ್ಜಾಗಿದೆ. ['ಭಾಗ್ಯ' ಘೋಷಣೆ ಸಾಲದು, ಅನುಷ್ಠಾನಕ್ಕೆ ತನ್ನಿ: ಕಾಗೋಡು]
ಇಂದಿನ ಪ್ರತಿಭಟನೆಗಳು
* ಬೆಳಗ್ಗೆ 9.30ಕ್ಕೆ ಎರಡು ವರ್ಷಗಳಿಂದ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಪಾವತಿ ಮಾಡುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
* ಬೆಳಗ್ಗೆ 10.30ಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.
* ಬೆಳಗ್ಗೆ 11 ಗಂಟೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಧಾರವಾಡದಿಂದ ನಡೆಸಿದ ಪಾದಯಾತ್ರೆ ಸಿ.ಪಿ.ಹೆಡ್ ಮೈದಾನದಲ್ಲಿ ಅಂತ್ಯಗೊಳ್ಳಲಿದ್ದು, ಬೃಹತ್ ಸಮಾವೇಶ ನಡೆಯಲಿದೆ.