ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹದಾಯಿಗೆ ಆಗ್ರಹಿಸಿ ರಾಮದುರ್ಗ ಶಾಸಕ ಅಶೋಕ್ ರಾಜೀನಾಮೆ

By Mahesh
|
Google Oneindia Kannada News

ರಾಮದುರ್ಗ(ಬೆಳಗಾವಿ), ಜುಲೈ 30: ಮಹದಾಯಿ ಯೋಜನೆಯಲ್ಲಿ ರಾಜ್ಯಕ್ಕೆ ಆದ ಅನ್ಯಾಯವನ್ನು ವಿರೋಧಿಸಿ ಬೆಳಗಾವಿ ಜಿಲ್ಲೆ ರಾಮದುರ್ಗದ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಒನ್ ಇಂಡಿಯಾ ಕನ್ನಡ ಜೊತಗೆ ಮಾತನಾಡಿದ ಅವರು, 'ನಾನು ನನ್ನ ಕ್ಷೇತ್ರದಲ್ಲಿರುವುದರಿಂದ ತಹಸೀಲ್ದಾರ್ ಮೂಲಕ ಸ್ಪೀಕರ್ ಗೆ ರಾಜೀನಾಮೆ ಪತ್ರವನ್ನು ನೀಡುತ್ತಿದ್ದೇನೆ. [ಗ್ಯಾಲರಿ: ಮಹದಾಯಿ ತೀರ್ಪು ಖಂಡಿಸಿ ರೈತರ ಆಕ್ರೋಶ]

ಒಂದು ವೇಳೆ ಖುದ್ದಾಗಿ ಬಂದು ರಾಜೀನಾಮೆ ಸಲ್ಲಿಸಬೇಕೆಂದು ಸಭಾಧ್ಯಕ್ಷರು ಹೇಳಿದರೆ ಬೆಂಗಳೂರಿಗೆ ತೆರಳಿ ಖುದ್ದಾಗಿ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುವೆ ಎಂದು ಹೇಳಿದರು. [ಮಹದಾಯಿ ನೀರು ಹಂಚಿಕೆ : ಕಥೆ ವ್ಯಥೆ ಟೈಮ್ ಲೈನ್]

Ashok MLA

ಕಳಸಾ ಬಂಡೂರಿ ಕೇವಲ ಪ್ರತಿಭಟನೆಗಳು ಮಾಡಿದರೇ ಮಾತ್ರ ಪರಿಹಾರ ಆಗುವುದಿಲ್ಲ ಈ ಭಾಗದ ಎಲ್ಲಾ ಶಾಸಕರು, ಸಂಸದರು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ ಸದಸ್ಯರುಗಳು ರಾಜೀನಾಮೆ ನೀಡುವ ಮೂಲಕ ಪ್ರಧಾನಮಂತ್ರಿಗಳಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದರ.

Ashok resignation

ಮಹದಾಯಿ ಕುಡಿಯುವ ನೀರಿನ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಇದರಿಂದ ನಾನು ಯಾರ ಒತ್ತಡಕ್ಕೆ ಒಳಗಾಗದೆ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆಂದು ಹೇಳಿದರು.

ಮಹದಾಯಿಗೆ ಬೆಂಬಲ ನೀಡಲು 2 ಜಿಲ್ಲಾ ಪಂಚಾಯಿತಿಯ ಸದಸ್ಯರು, 9 ತಾಲೂಕು ಮಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, 13 ಜನ ಪುರಸಭೆ ಸದಸ್ಯರು, 22 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗು ಉಪಾಧ್ಯಕ್ಷರು ಸಾಮೂಹಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ತಿಳಿಸಿದರು.

English summary
Belagavi : Ramadurga MLA Ashok Mahadevappa Pattan has tendred his resignation to Tahasildar in support of Kalasa Banduri project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X