ಆಕ್ರೋಶ್ ದಿವಸ್ : ರಾಜ್ಯದಲ್ಲಿ ಸೋಮವಾರ ಅಧಿವೇಶನ ರದ್ದು
ಬೆಳಗಾವಿ. ನವೆಂಬರ್ 25: ಆಕ್ರೋಶ್ ದಿವಸ್ ಕಾರಣದಿಂದಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನವನ್ನು ಸೋಮವಾರ ರದ್ದುಗೊಳಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಸೋಮವಾರ ರಜೆಯ ನಷ್ಟ ತುಂಬಲು ಡಿ.3 ಶನಿವಾರವೂ ಅದಿವೇಶನ ನಡೆಸಲಿದೆ.
ವಿಧಾನ ಸಭೆಯ ಸ್ಪೀಕರ್ ಕೆ.ಬಿ.ಕೋಳಿವಾಡ ಈ ನಿರ್ದಾರವನ್ನು ಸಭೆಯಲ್ಲಿ ಪ್ರಕಟಿಸಿದ್ದು, ಆಕ್ರೋಶ್ ದಿವಸ್ ಬಗ್ಗೆ ಸೋಮವಾರದ ಬದಲಿಗೆ ಮುಂದಿನ ಶನಿವಾರ ಕಾರ್ಯನಿರ್ವಹಿಸುವ ಬಗ್ಗೆ ಸದಸ್ಯರ ಸಲಹೆ ಹಾಗು ಆಕ್ಷೇಪ ಗಳಿದ್ದಲ್ಲಿ ತಿಳಿಸಲು ಹೇಳಿದರು. ಅಧ್ಯಕ್ಷೀಯ ಅಧಿವೇಶನವು ನ.28 ಸೋಮವಾರದ ಬದಲಿಗೆ ಡಿ.3 ಕ್ಕೆ ಮುಂದೂಡಲಾಗಿದೆ ಎಂದು ಘೋಷಿಸಿದರು.

ಆದರೆ ಸದನದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರವೂ ಎರಡೂ ಸದನಗಳಲ್ಲಿ ಚರ್ಚೆ ಮುಂದುವರೆಯಬೇಕು ಎಂದು ಕೇಳಿಕೊಂಡರು. ಅಲ್ಲದೆ ಸ್ಪೀಕರ್ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದರು. ಕೋಳಿವಾಡ ಅವರು ಘೋಷಿಸಿದ ನಿರ್ಧಾರ ಶುಕ್ರವಾರ ಸದನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು.ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದಗಳು ನಡೆದವು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications