ಬೆಳಗಾವಿ: ಗುಂಡು ಹಾರಿಸಿಕೊಂಡು ಬಿಜೆಪಿ ಮುಖಂಡ ಆತ್ಮಹತ್ಯೆ
ಬೆಳಗಾವಿ, ಜುಲೈ 19 : ಬೆಳಗಾವಿಯ ಬಿಜೆಪಿ ಬ್ಲಾಕ್ ಉಪಾಧ್ಯಕ್ಷ ತನ್ನ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನಲ್ಲಿ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಸಾವು
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರಕರಶೀಗಿಹಳ್ಳಿ ಗ್ರಾಮದ ನಿವಾಸಿ ಶಿವನಗೊಡ ಪಾಟೀಲ ಎಂದಿನಂತೆ ಗ್ರಾಮದ ದೇವಸ್ಥಾನಕ್ಕೆ ಹೋದಲ್ಲಿಯೇ ತನ್ನ ಬಳಿ ಇದ್ದ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡಿದ್ದಾನೆ.
ಗ್ರಾಮದ ಗಿರಿಮಲ್ಲೇಶ್ವರ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಶಿವನಗೌಡ ಪಾಟೀಲ್ ಜನರ ಮಧ್ಯೆಯೇ ದೇವಸ್ಥಾನದಲ್ಲೇ ತನ್ನ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದ ಕೂಡಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.
Comments
English summary
A BJP leader alleged committed suicide by shooting himself at Turukara Sheegihalli of Bailhongal taluk in Belagavi district.Shivanagouda Patil (53) was found dead near the Girimalleshwar temple at Turukara Sheegihalli village on Tuesday morning. He had served as the vice president of the block BJP unit.
Story first published: Wednesday, July 19, 2017, 8:54 [IST]