ದುಬಾರಿ ಮದುವೆಗಳಲ್ಲಿ ಭಾಗವಹಿಸದಿರಲು ಸಿದ್ದು ನಿರ್ಧಾರ
ಶ್ರೀಮಂತಿಕೆಯನ್ನು ಪ್ರದರ್ಶಿಸಲು ನಡೆಸುವ ಅದ್ದೂರಿ ಮದುವೆ ಸಮಾರಂಭಗಳಲ್ಲಿ ಭಾಗವಹಿಸದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ.
ಬೆಳಗಾವಿ, ನವೆಂಬರ್, 21: ದುಬಾರಿ ಮದುವೆಗಳಲ್ಲಿ ಭಾಗವಹಿಸದಿರುಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದು, ಇತರರಿಗೂ ಮಾದರಿಯಾಗಿದ್ದಾರೆ. ತಮ್ಮ ಸಂಪುಟ ಸಹೋದ್ಯೋಗಿ ಗೋಕಾಕ್ ಶಾಸಕ ರಮೇಶ್ ಜಾರಕಿ ಹೊಳಿ ಅವರ ಪುತ್ರನ ಮದುವೆ ಸಮಾರಂಭದಲ್ಲೂ ಸಹ ಭಾಗವಹಿಸದಿರಲು ಅವರು ನಿರ್ಧರಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆ ಬಳಿಕ ಈ ವಿಷಯವನ್ನು ತಿಳಿಸಿದ ಸಿಎಂ "ಇತ್ತೀಚೆಗಷ್ಟೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಜಿ ಸಚಿವರೊಬ್ಬರ ಪುತ್ರಿಯ ಅದ್ದೂರಿ ವಿವಾಹದ ಕುರಿತು ಟೀಕಿಸಿದ್ದೇವೆ."[ಟ್ರೋಲ್ ಹೈಕ್ಳಿಗೆ ಆಹಾರವಾದ ಜನಾರ್ದನ ರೆಡ್ಡಿ ಪುತ್ರಿಯ ಮದುವೆ!]
ಈಗ ನಾವೇ ಮತ್ತೊಂದು ದುಬಾರಿ ಮದುವೆಯಲ್ಲಿ ಪಾಲ್ಗೊಳ್ಳುವುದು ಸರಿ ಅಲ್ಲ ಎಂದು ಅವರು ತಮ್ಮ ಸಂಪುಟ ಸದಸ್ಯರ ಬಳಿ ಹೇಳಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಗೋಕಾಕ್ ನಲ್ಲಿ ನಡೆಸುತ್ತಿರುವ ತಮ್ಮ ಪುತ್ರನ ಮದುವೆಗೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು.[ಗಾಲಿ ರೆಡ್ಡಿ ಮಗಳ ಮದುವೆಯಲ್ಲಿ ಕಂಡ ಮುಖಗಳು]
ಪಕ್ಷದ ತತ್ವ, ಸಿದ್ದಾಂತಗಳನ್ನು ಗಮದಲ್ಲಿಟ್ಟುಕೊಂಡು ದುಬಾರಿ ವಿವಾಹ ಮಹೋತ್ಸವಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಹೇಳಿದ್ದರು. [ಹೊಗಳಿಕೆ ಟೀಕೆ ಅಪಹಾಸ್ಯಕ್ಕೀಡಾದ ರೆಡ್ಡಿ ಮಗಳ ಮದುವೆ!]
ಭಾನುವಾರ ಹೊಳಲ್ಕೆರೆಯಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿಯೂ ಸಹ ಈ ಕುರಿತು ಮಾತನಾಡಿದ್ದ ಸಿದ್ದರಾಮಯಯ್ಯ "ಇತ್ತೀಚೆಗಷ್ಟೆ ಮಾಜಿ ಸಚಿವರೊಬ್ಬರು ತಮ್ಮ ಪುತ್ರಿಯ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು, ಆ ಮದುವೆ ತೀರಾ ಅಸಹ್ಯಕರವಾಗಿತ್ತು" ಎಂದು ಪರೋಕ್ಷವಾಗಿ ಟೀಕಿಸಿದ್ದರು.
"ಶ್ರೀಮಂತರು ತಮ್ಮ ಹಣ ಶ್ರೀಮಂತಿಕೆ ಪ್ರದರ್ಶನಕ್ಕಾಗಿ ಈ ರೀತಿಯ ಸಮಾರಂಭಗಳನ್ನು ಏರ್ಪಡಿಸುತ್ತಾರೆ. ಬಡವರು ಇದರಿಂದ ಪ್ರೇರಣೆಗೊಂಡು ಸಾಲಗಾರರಾಗುತ್ತಾರೆ" ಎಂದು ಸಮಾರಂಭದಲ್ಲಿ ಅದ್ದೂರಿಗಳ ಮದುವೆಗಳ ಕುರಿತು ಟೀಕಿಸಿದ್ದರು.