ಆಡಳಿತ ಪಕ್ಷದಿಂದಲೇ ವಿಧಾನಸಭೆಯಲ್ಲಿ ಧರಣಿ
ಬೆಳಗಾವಿ, ನವೆಂಬರ್ 22: ಆಡಳಿತ ಪಕ್ಷದ ಸದಸ್ಯರಿಂದಲೇ ವಿದಾನ ಸಭೆಯಲ್ಲಿ ಧರಣಿ ನಡೆದ ಪ್ರಸಂಗ ಜರುಗಿತು.
ಲಂಬಾಣಿ ತಾಂಡ್ಯಗಳು, ಅನಧಿಕೃತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿ ಪಕ್ಷದ ಶಾಸಕರು ಧರಣಿ ನಡೆಸಿದರು.
ಪ್ರಶ್ನೋತ್ತರ ಕಲಾಪವಾದ ನಂತರ ತಾಂಡ್ಯಗಳ ವಿಷಯ ಪ್ರಸ್ತಾಪಿಸಲು ಕಾಂಗ್ರೆಸ್ ಶಾಸಕ ಶಿವಮೂರ್ತಿ ಅವರು ಪ್ರಯತ್ನಿಸಿದರು. ಸರಿಯಾದ ಮನ್ನಣೆ ದೊರೆಯಲಿಲ್ಲ. ನಾನು ಈ ಸದನಕ್ಕೆ ಬಂದು ಮೂರೂವರೆ ವರ್ಷವಾಗಿದೆ. ಲಂಬಾಣಿ ತಾಂಡ್ಯಗಳು, ಹಾಡಿಗಳು, ಹಟ್ಟಿಗಳು ಖಾಸಗಿ ಹಾಗೂ ಅರಣ್ಯ ಜಮೀನುಗಳಲ್ಲಿವೆ. ಅವನ್ನು ಅನಧಿಕೃತ ಎಂದು ತೀರ್ಮಾನಿಸಿರುವ ಸರ್ಕಾರ ಈವರೆಗೂ ಮೂಲಸೌಲಭ್ಯ ಕಲ್ಪಿಸಿಲ್ಲ. ಇದಕ್ಕಾಗಿ ಪ್ರತ್ಯೇಕ ಕಾನೂನು ರಚನೆಯಾಗಬೇಕು ಎಂದು ಕಿಡಿಕಾರಿದರು.

ಖಾಸಗಿ ಬಿಲ್ ಮಂಡನೆಗೆ ನಾನು ನಿರಂತರ ಪ್ರಯತ್ನ ಮಾಡುತ್ತಿದ್ದೇನೆ. ಆದರೂ ಅವಕಾಶ ಸಿಕ್ಕಿಲ್ಲ ಎಂದು ಕೂಗಾಡುತ್ತಾ ಸಭಾಧ್ಯಕ್ಷರ ಮುಂದಿನ ಬಾವಿಗಿಳಿದು ಧರಣಿ ಆರಂಭಿಸಿದರು.
ಈ ವೇಳೆ ಬಿಜೆಪಿ ಶಾಸಕರು ಮೇಜುಕುಟ್ಟಿ ಲೇವಡಿ ಮಾಡಿದರು. ಸಭಾಧ್ಯಕ್ಷರು ನೀವು ಸ್ವಸ್ಥಾನಕ್ಕೆ ತೆರಲಿ ವಿಷಯ ಪ್ರಸ್ತಾಪಕ್ಕೆ ಅವಕಾಶ ಕೊಡುವುದಾಗಿ ತಿಳಿಸಿದರು. ಸ್ವ ಸ್ಥಾನಕ್ಕೆ ಮರಳಿ ಶಿವಮೂರ್ತಿ ರಾಜ್ಯದಲ್ಲಿ 58 ಸಾವಿರ ದಾಖಲೆ ರಹಿತ ಗ್ರಾಮಗಳಿವೆ. ಇವುಗಳಿಗೆ ಅಧಿಕೃತ ಸ್ಥಾನಮಾನ ನೀಡಬೇಕು. ಇವುಗಳಿಗೆ ಪ್ರತ್ಯೇಕ ಕಾಯ್ದೆ ರಚಿಸಬೇಕೆಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು, ಭೂ ಸುಧಾರಣಾ ಕಾಯ್ದೆಗೆ ನಿನ್ನೆ ಒಪ್ಪಿಗೆ ನೀಡಲಾಗಿದೆ. ಬೇರೆ ಬೇರೆ ಜಾಗಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ತಾಂಡ್ಯಗಳು, ಹಟ್ಟಿಗಳು ನಿರ್ಮಾಣಗೊಂಡಿವೆ. ಅವುಗಳನ್ನು ಸಕ್ರಮ ಮಾಡಲು ಹಕ್ಕುಪತ್ರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿಗಳಿಂದ ವರದಿ ಪಡೆಯುತ್ತಿದ್ದೇವೆ. ವರದಿ ಬಂದ ನಂತರ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆಯಿತ್ತರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ












Click it and Unblock the Notifications