ರಾಯಚೂರು- ಮಂತ್ರಾಲಯ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸರ್ಕಾರ ಪ್ರಸ್ತಾವನೆ
ರಾಯಚೂರು-ಮಂತ್ರಾಲಯಂ ರಸ್ತೆಯನ್ನು ರೂ.441.81 ಕೋಟಿ ವೆಚ್ಚದಲ್ಲಿ ಚತುಷ್ಪಧ ರಸ್ತೆಯಾಗಿ ನಿರ್ಮಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಬೆಳಗಾವಿ, ನವೆಂಬರ್, 22: ರಾಯಚೂರಿನಿಂದ ಮಂತ್ರಾಲಯಕ್ಕೆ 441.81 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಲು, ಕೇಂದ್ರ ಭೂ ಸಾರಿಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಂದು ಲೋಕೋಪಯೋಗಿ ಸಚಿವ ಎಚ್.ಸಿ ಮಹದೇವಪ್ಪ ಅವರು ಅಧಿವೇಶನದಲ್ಲಿ ತಿಳಿಸಿದರು.
ಇದೇ ಹೆದ್ದಾರಿ ಮಾರ್ಗದಲ್ಲಿರುವ ಕೃಷ್ಣಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸಲು 160 ಕೋಟಿ ರೂ. ವೆಚ್ಚದ ಯೋಜನೆಯ ಪ್ರಸ್ತಾವನೆಯನ್ನೂ ಸಹ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು. [ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಪಡೆ: ಪರಮೇಶ್ವರ್]

ರಸ್ತೆ ಸ್ಥಿತಿಗತಿ ತಿಳಿಯಲು ಸಾಪ್ಟ್ ವೇರ್
ರಾಜ್ಯದ ರಸ್ತೆ ಸ್ಥಿತಿಗತಿಗಳ ಮಾಹಿತಿ ಟೆಂಡರ್ ಪ್ರಕ್ರಿಯೆ ಯೋಜನೆ ಕುರಿತಂತೆ ಮಾಹಿತಿ
ಸಂಗ್ರಹಿಸಲು ಹಾಗೂ ತಿಳಿಸಲು ಲೋಕೋಪಯೋಗಿ ಇಲಾಖೆ ಹೊಸ ತಂತ್ರಾಂಶವೊಂದನ್ನು ಅಭಿವೃದ್ಧಿಪಡಿಸಿದೆ ಎಂದು ಅವರು ವಿಧಾನ ಪರಿಷತ್ತಿಗೆ ತಿಳಿಸಿದರು.[ಆಡಳಿತ ಪಕ್ಷದಿಂದಲೇ ವಿಧಾನಸಭೆಯಲ್ಲಿ ಧರಣಿ]
ಕಲಬುರಗಿ ವಿಮಾನ ನಿಲ್ದಾಣ ಶೀಘ್ರ ಪೂರ್ಣ
ಮುಂದಿನ ಮಾರ್ಚ್ ವೇಳೆಗೆ ಕಲಬುರಗಿಯಲ್ಲಿ ವಿಮಾನ ನಿಲ್ದಾಣದ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.ಖಾಸಗಿ ಸಂಸ್ಥೆಯಿಂದ ವಿಮಾನ ನಿಲ್ಧಾಣ ಕಾಮಗಾರಿಯನ್ನು ವಾಪಾಸ್ ಪಡೆಯಲಾಗಿದೆ ಇಲಾಖೆ ವತಿಯಿಂದ 109.47ಕೋಟಿ ವೆಚ್ಚದಲ್ಲಿ ಮುಂದಿನ ಮಾರ್ಚ್ 18ರ ಹೊತ್ತಿಗೆ ಪೂರ್ಣಗೊಳಿಸಲಾಗುವುದು ಎಂದು ಸದನಕ್ಕೆ ಅವರು ತಿಳಿಸಿದರು.

ಟೋಲ್ ಗೇಟ್ ಗಳಲ್ಲಿ ಅಂಬ್ಯುಲೆನ್ಸ್-ವಿಐಪಿಗಳಿಗೆ ಪ್ರತ್ಯೇಕ ದ್ವಾರ
ಅಂಬ್ಯುಲೆನ್ಸ್ ಮತ್ತು ವಿಐಪಿ ವಾಹನಗಳಿಗೆ ಟೋಲ್ ಗೇಟ್ ಗಳಲ್ಲಿ ಪ್ರತ್ಯೇಕ ದ್ವಾರ ವ್ಯವಸ್ಥೆ ಮಾಡಲಾಗಿದೆ. ಕೆಲ ಟೋಲ್ ಗೇಟ್ ಗಳಲ್ಲಿ ಸ್ಥಳದ ಅಭಾವದಿಂದ ಪ್ರತ್ಯೇಕ ದ್ವಾರ ಕಲ್ಪಿಸಲು ಸಾಧ್ಯವಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಮಹದೇವಪ್ಪ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ












Click it and Unblock the Notifications