ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಾ ಪ್ರವೀಣೆ ಬಳ್ಳಾರಿಯ ಅನಿತಾಗೆ ಐಎಎಸ್ ಮಾಡುವ ಕನಸು

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಮೇ 25 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬಳ್ಳಾರಿಯ ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಐಎಎಸ್ ಅಧಿಕಾರಿ ಆಗಬೇಕು ಎಂಬುದು ಅನಿತಾ ಅವರ ಕನಸಾಗಿದೆ. [ಕಲೆಯಲ್ಲಿ ಅರಳಿದ ಧಾರವಾಡದ ಪ್ರತಿಭೆ ಶಶಿಕಲಾ]

ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಇಂದೂ ಪಿಯು ಕಾಲೇಜಿನ ಅನಿತಾ ಬಸಪ್ಪ 600 ಕ್ಕೆ 585 ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಿತಾ ಅವರ ಮನೆಯ ಬಡತನ ಅವರ ಓದಿಗೆ ಅಡ್ಡಿಯಾಗಿಲ್ಲ. [ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ]

anitha basappa

ಅನಿತಾ ಅವರ ತಂದೆ ಬಸಪ್ಪ ಅವರು ಕೊಟ್ಟೂರು ಬಸ್ ನಿಲ್ದಾಣದಲ್ಲಿ ಬಾಳೆ ಹಣ್ಣು ಮಾರಾಟ ಮಾಡುತ್ತಾರೆ. ಮನೆಯ ಕಷ್ಟದ ನಡುವೆಯೂ ಅನಿತಾ ಅವರ ಓದಿಗೆ ಮನೆಯವರು ಸಂಪೂರ್ಣ ಬೆಂಬಲ ನೀಡಿದ್ದಾರೆ. [ಬಳ್ಳಾರಿಯ ಯಶ್ವಿತಾ ಸಾಧನೆಗೆ ಅಡ್ಡಿಯಾಗದ ಬಡತನ]

basappa

ಫಲಿತಾಂಶದ ಬಳಿಕ ಒನ್ ಇಂಡಿಯಾ ಜೊತೆ ಮಾತನಾಡಿದ ಅನಿತಾ ಅವರು ಸಂತಸ ಹಂಚಿಕೊಂಡರು. 'ಐಎಎಸ್ ಅಧಿಕಾರಿಯಾಗಿ ಸಮಾಜ ಸೇವೆ ಮಾಡಬೇಕು ಎಂಬ ಕನಸು ಹೊಂದಿರುವುದಾಗಿ' ತಿಳಿಸಿದರು. [2ನೇ ಪಿಯುಸಿ ಫಲಿತಾಂಶ: ಯಾವ ಜಿಲ್ಲೆ ಯಾವ ಸ್ಥಾನದಲ್ಲಿದೆ?]

'ಎರಡು ಅಥವ ಮೂರನೇ ಸ್ಥಾನಗಳಿಸುವ ನಿರೀಕ್ಷೆ ಇತ್ತು. ಆದರೆ, ಮೊದಲ ಸ್ಥಾನ ಪಡೆದಿರುವುದು ಸಂತಸ ಮೂಡಿಸಿದೆ. ನನ್ನ ಸಾಧನೆಗೆ ತಂದೆ-ತಾಯಿ ಸೇರಿದಂತೆ ಕುಟುಂಬದವರೆಲ್ಲರ ಸಹಕಾರವೂ ಇದೆ' ಎನ್ನುತ್ತಾಳೆ ಅನಿತಾ. [ಇಂಗ್ಲಿಶ್ ನಲ್ಲಿ ಓದಿ]

English summary
Anitha Basappa has bagged the top state rank in 2nd PUC arts. Anitha studied Indu PU collage at Kudligi taluk, Ballari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X