ಮನಿ ಲಾಂಡ್ರಿಂಗ್ ಕೇಸ್: ಬಿ ಶ್ರೀರಾಮುಲು ಗನ್ ಮ್ಯಾನ್ ಬಂಧನ
ಕರ್ನಾಟಕ ಭೂಸ್ವಾಧೀನ ಪ್ರಾಧಿಕಾರದ ವಿಶೇಷ ಅಧಿಕಾರಿ ಭೀಮಾನಾಯ್ಕ್ ಅವರ ಕಾರು ಚಾಲಕನ ಆತ್ಮಹತ್ಯೆ ಪ್ರಕರಣ ಹಾಗೂ ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ಚನ್ನಬಸಪ್ಪ ಹೊಸಮನಿ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ.
ಬಳ್ಳಾರಿ, ಡಿಸೆಂಬರ್ 20: ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಬಿ ಶ್ರೀರಾಮುಲು ಅವರ ಗನ್ ಮ್ಯಾನ್ ನನ್ನು ಸಿಐಡಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಕರ್ನಾಟಕ ಭೂಸ್ವಾಧೀನ ಪ್ರಾಧಿಕಾರದ ವಿಶೇಷ ಅಧಿಕಾರಿ ಭೀಮಾನಾಯ್ಕ್ ಅವರ ಕಾರು ಚಾಲಕನ ಆತ್ಮಹತ್ಯೆ ಪ್ರಕರಣ ಹಾಗೂ ಮನಿಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ಚನ್ನಬಸಪ್ಪ ಹೊಸಮನಿ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ.[ಚಾಲಕ ರಮೇಶ್ ಆತ್ಮಹತ್ಯೆ ಕೇಸ್, ಕೆಎಎಸ್ ಅಧಿಕಾರಿ ಅಮಾನತು!]

ಕಪ್ಪು ಹಣವನ್ನು ಬಿಳಿ ಮಾಡಿಕೊಡುವ ದಂಧೆಯ ಬಗ್ಗೆ ಪೂರ್ಣ ಮಾಹಿತಿ ಹೊಂದಿದ್ದ ಕಾರು ಚಾಲಕ ರಮೇಶ್ ಗೌಡ ಅವರು ಅಧಿಕಾರಿಗಳ ಭಯದಿಂದ ಮದ್ದೂರಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ ನಲ್ಲಿ ಶ್ರೀರಾಮುಲು, ಜನಾರ್ದನ ರೆಡ್ಡಿ ಸೇರಿದಂತೆ ಅಧಿಕಾರಿಗಳ ಹೆಸರನ್ನು ನಮೂದಿಸಿದ್ದರು. ಸದ್ಯ ಈ ಪ್ರಕರಣದಲ್ಲಿ ಭೀಮಾನಾಯ್ಕ್ ಅವರನ್ನು ಬಂಧಿಸಲಾಗಿದೆ.
ಮುಖ್ಯಮಂತ್ರಿಗಳ ಆಪ್ತ ಚಿಂಚೋಳಿಯ ಶಾಸಕ ಹಾಗು ಸಂಸದೀಯ ಕಾರ್ಯದರ್ಶಿ ಉಮೇಶ್ ಜಾಧವ್ ಅವರ ಅಳಿಯನ ಮನೆಯಲ್ಲಿ ಆಶ್ರಯ ಪಡೆದಿದ್ದರು.[ರಮೇಶ್ ಗೌಡ ಬರೆದ ಡೆತ್ ನೋಟ್ ನಲ್ಲಿ ಏನಿದೆ?]
ಕಲಬುರಗಿ ನಗರದ ಎನ್ ಜಿಒ ಕಾಲೋನಿಯಲ್ಲಿರುವ ಉಮೇಶ್ ಜಾದವ್ ಅಳಿಯನ ಮನೆಯಲ್ಲಿಯೇ ಭೀಮಾನಾಯ್ಕ್ ಆಶ್ರಯ ಪಡೆದಿದ್ದರು. ಭೀಮಾನಾಯ್ಕ್ ರನ್ನು ಬಂಧಿಸುವಾಗ ಶಾಸಕ ಉಮೇಶ ಜಾಧವ ಅವ್ರ ಪತ್ನಿ ಮತ್ತು ತಾಯಿ ಸಹ ಅದೇ ಮನೆಯಲ್ಲಿದ್ದರು.['ಇಲ್ಲಿ ನೂರು ಕೋಟಿ, ಅಲ್ಲಿನ 70 ಕೋಟಿ ಜನಾ ರೆಡ್ಡಿಯದೇ']
ಗಾಲಿ ಜನಾರ್ದನರೆಡ್ಡಿಯ ಮಗಳ ಮದುವೆಯ ಸಂದರ್ಭದಲ್ಲಿ 100ಕೋಟಿ ರೂ. ಕಪ್ಪುಹಣವನ್ನು ಹೊಸ ನೋಟುಗಳಾಗಿ ಬದಲಾವಣೆ ಮಾಡಲು ಭೀಮಾನಾಯ್ಕ್ ಸಹಕರಿಸಿದ ಆರೋಪ ಹೊತ್ತಿದ್ದಾರೆ. ಭೀಮಾನಾಯ್ಕ್ ಹಾಗೂ ಕಾರು ಚಾಲಕ ಮಹಮದ್ ನಂತರ ಈಗ ಗನ್ ಮ್ಯಾನ್ ಚನ್ನಬಸಪ್ಪ ಅವರನ್ನು ಬಂಧಿಸಲಾಗಿದೆ.(ಒನ್ಇಂಡಿಯಾ ಸುದ್ದಿ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications