ಕಾಫಿ ಬೋರ್ಡಿಗೆ ಅಧ್ಯಕ್ಷನಾದ ಬೆಳೆಗಾರ: ಸಂಸದೆ ಶೋಭಾ ಸಂತಸ
ಅಧಿಕಾರಿಗಳ ಸುಪರ್ದಿಯಲ್ಲಿದ್ದ ಕಾಫಿ ಬೋರ್ಡಿಗೆ ಸುಮಾರು 70 ವರ್ಷಗಳ ನಂತರ ಬೆಳೆಗಾರರ ಪ್ರತಿನಿಧಿಯೊಬ್ಬರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರುವುದನ್ನು ಸಂಸದೆ ಶೋಭಾ ಕರಂದ್ಲಾಜೆ ಸ್ವಾಗತಿಸಿದರು.
ಬೆಂಗಳೂರು, ಮೇ 17:ಅಧಿಕಾರಿಗಳ ಸುಪರ್ದಿಯಲ್ಲಿದ್ದ ಕಾಫಿ ಬೋರ್ಡಿಗೆ ಸುಮಾರು 70 ವರ್ಷಗಳ ನಂತರ ಬೆಳೆಗಾರರ ಪ್ರತಿನಿಧಿಯೊಬ್ಬರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರುವುದನ್ನು ಸಂಸದೆ ಶೋಭಾ ಕರಂದ್ಲಾಜೆ ಸ್ವಾಗತಿಸಿದ್ದಾರೆ.
ಚಿಕ್ಕಮಗಳೂರಿನ ಪ್ಲಾಂಟರ್ ಎಂಎಸ್ ಬೋಜೇಗೌಡ ಅವರು ಕಾಫಿ ಬೋರ್ಡಿಗೆ ಅಧ್ಯಕ್ಷರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಬೋಜೇಗೌಡ ಅವರ ಅಧಿಕಾರ ಅವಧಿ ಡಿಸೆಂಬರ್ 14, 2018ರ ತನಕ ಇದೆ.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಅಧಿಕಾರೇತರು ಮತ್ತು ಕಾಫಿ ಬೆಳೆಗಾರರೊಬ್ಬರು ಕಾಫಿ ಮಂಡಳಿಗೆ ಅಧ್ಯಕ್ಷರಾಗಿರುವುದು ಸೂಕ್ತವಾಗಿದೆ. ಇವರಿಗೆ ಕಾಫಿ ಬೆಳೆಗಾರರ ಸಮಸ್ಯೆಗಳ ಅರಿವಿರುತ್ತದೆ ಎಂದು ಹೇಳಿದರು.

ಕಾಫಿ ಮಂಡಳಿ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ, ಶಾಸಕ ಸಿ.ಟಿ.ರವಿ, ಬಿ.ಎಲ್.ಶಂಕರ್, ವಾಮ ನಾಚಾರ್ಯ, ಅಶ್ವತ್ಥನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
ಬೋಜೇಗೌಡ ಮಾತನಾಡಿ, ಜಮ್ಮು-ಕಾಶ್ಮೀರದ ಸೈನಿಕರು ಕೂಡ ಕಾಫಿ ಕುಡಿಯುವಂತಾಗ ಬೇಕು. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಕಾಫಿ ತಲುಪಬೇಕು. ಮೋದಿ ಅವರ ಆಶಯದಂತೆ ಕಾಫಿ ರಫ್ತು ದ್ವಿಗುಣಗೊಳಿಸಲು ಶ್ರಮಿಸಲಾಗುವುದು. ಸದ್ಯ 3 ಲಕ್ಷ ಟನ್ ಇರುವ ಉತ್ಪಾದನೆಯನ್ನು 6 ಲಕ್ಷ ಟನ್ ಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾಫಿ ಸೇವನೆ ಹೆಚ್ಚಳ ಮಾಡುವುದು, ಕಾಫಿ ಪುಡಿ -ಚಕೋರಿ ಬಗ್ಗೆ ಇರುವ ಗೊಂದಲ ಪರಿಹರಿಸುವುದು, ಬರದ ಪರಿಸ್ಥಿತಿಯಲ್ಲಿ ಕಾಫಿ ಬೆಳೆಗಾರರ ಪರಿಸ್ಥಿತಿ ಅವಲೋಕನ ಸೇರಿದಂತೆ ಬೆಳೆಗಾರರ ಅನೇಕ ಸಮಸ್ಯೆಗಳನ್ನು ಬಗೆ ಹರಿಸಲು ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಬರುವ ಕಾಫಿ ಬೋರ್ಡ್ ಇನ್ಮುಂದೆ ಶ್ರಮಿಸಲಿದೆ.
{promotion-urls}
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications