ಕನಕಗಿರಿಯ ಬಾಹುಬಲಿಗೆ ಮಹಾಮಸ್ತಾಭಿಷೇಕ
ಚಾಮರಾಜನಗರ, ಫೆಬ್ರವರಿ 2: ಚಾಮರಾಜನಗರ ಜಿಲ್ಲೆಯ ಕನಕಗಿರಿ ಅತಿಶಯ ಸಿದ್ದ ಕ್ಷೇತ್ರದಲ್ಲಿ ನೂತನ ಬಾಹುಬಲಿಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ, 1108 ಕಳಸದಿಂದ ಮಹಾಮಸ್ತಾಭಿಷೇಕ ಮಾಡುವ ಮೂಲಕ ಜೈನ ಸಮುದಾಯದವರು ಭಕ್ತಿಭಾವ ಮೆರೆದರು.
ಮಲೆಯೂರು ಗ್ರಾಮದ ಬಳಿಯಿರುವ ಜೈನ ಕಾಶಿ ಎಂದೇ ಖ್ಯಾತಿ ಪಡೆದ ಕನಕಗಿರಿ ಅತಿಶಯ ಸಿದ್ದ ಕ್ಷೇತ್ರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಬಾಹುಬಲಿಗೆ ಘೋಷಣೆ ಕೂಗುತ್ತಾ ಹರ್ಷ ವ್ಯಕ್ತಪಡಿಸಿದರು. ನೂತನವಾಗಿ 18 ಅಡಿ ಎತ್ತರದ ಬಾಹುಬಲಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವುದರೊಂದಿಗೆ ಮಹಾಮಸ್ತಾಭಿಷೇಕ ನೆರವೇರಿಸಿ, ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಯಿತು.[ಗೊಮ್ಮಟಗಿರಿಯ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕ]

ಬಳಿಕ ಬಾಹುಬಲಿ ಮೂರ್ತಿಗೆ 1108 ತುಂಬು ಕಳಸದ ನೀರು, ಹಾಲು, ಚಂದನ, ಅರಿಶಿನ- ಕುಂಕುಮ ಹೀಗೆ ಹಲವು ದ್ರವ್ಯಗಳಿಂದ ಮಹಾಮಸ್ತಕಾಭಿಷೇಕ ಮಾಡಲಾಯಿತು. ಕನಕಗಿರಿ ಸಿದ್ದಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಮಹಾಮಸ್ತಾಭಿಷೇಕದಲ್ಲಿ ಹಲವು ಗಣ್ಯರು, ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ ಸಾವಿರಾರು ಭಕ್ತರು ಭಾಗವಹಿಸಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications