ಗುಂಡ್ಲುಪೇಟೆಯ ದೊಡ್ಡಕೆರೆ, ಚೋಳರ ಕಾಲದ ಕಲ್ಯಾಣಿಯೇ?
ಕೆಲವು ದಿನಗಳ ಹಿಂದೆ ಕೆರೆ ದುರಸ್ತಿ ಮಾಡುವಾಗ ನೀರು ಉಕ್ಕಿ ಬಂದು ಸುದ್ದಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಹಂಗಳ ಸಮೀಪದ ದೊಡ್ಡಕೆರೆ ಚೋಳರ ಕಾಲದ ಕಲ್ಯಾಣಿಯಂತೆ!
ಗುಂಡ್ಲುಪೇಟೆ, ಮೇ 18: ಕೆಲವು ದಿನಗಳ ಹಿಂದೆ ಕೆರೆ ದುರಸ್ತಿ ಮಾಡುವಾಗ ನೀರು ಉಕ್ಕಿ ಬಂದು ಸುದ್ದಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಹಂಗಳ ಸಮೀಪದ ದೊಡ್ಡಕೆರೆ ಚೋಳರ ಕಾಲದ ಕಲ್ಯಾಣಿಯಂತೆ. ಇದಕ್ಕೆ ಸುಮಾರು 600 ವರ್ಷಗಳ ಇತಿಹಾಸವಿದೆಯಂತೆ!
ಹಾಗೆಂದು ಊರಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅದಕ್ಕೆಂದೇ ಐತಿಹಾಸಿಕ ಸ್ಮಾರಕ ಎಂಬ ರೀತಿಯಲ್ಲಿ ಈ ಕೆರೆಯ ದುರಸ್ತಿ ಕಾರ್ಯ ಇಂದು ಸಮಾರೋಪಾದಿಯಲ್ಲಿ ನಡೆಯುತ್ತಿದೆ![ಬತ್ತಿದ ಬಂಡೀಪುರದ ಮೂಲೆಹೊಳೆ: ಜನ-ಜಾನುವಾರು ಪರದಾಟ]

ಹಂಗಳ ಗ್ರಾ.ಪಂ. ವತಿಯಿಂದ ನರೇಗಾ ಯೋಜನೆಯಡಿ ದುರಸ್ತಿ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದು ಸಂಪೂರ್ಣಗೊಂಡಿದ್ದೇ ಆದರೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿದೆ.
ಕೆಲವು ದಿನಗಳ ಹಿಂದೆ ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯ ಹಿರಿಕೆರೆ ಸಮೀಪದ ದೊಡ್ಡಕೆರೆಯನ್ನು ಜೆಸಿಬಿ ಸಹಾಯದಿಂದ ಹೂಳೆತ್ತುವ ಸಂದರ್ಭದಲ್ಲಿ ಹಳೆಯ ಬಾವಿಯಿದ್ದ ಗುರುತುಗಳು ಹಾಗೂ ಕಲ್ಲಿನ ವಿಗ್ರಹ ದೊರೆತಿತ್ತು. ಹೀಗಾಗಿ ಜೆಸಿಬಿ ಚಾಲಕ ಹೂಳೆತ್ತಲು ನಿರಾಕರಿಸಿದ್ದನು. ಈ ಕೆರೆಯನ್ನು ಚೋಳರ ಕಾಲದ್ದು ಎನ್ನಲಾಗುತ್ತಿದ್ದು, ಈ ಬಗ್ಗೆ ಹೆಚ್ಚು ಸಂಶೋಧನೆಗಳು ನಡೆಯಬೇಕಿದೆ.[ಬರದಲ್ಲೂ ಬಂಡೀಪುರದ ಮೂರು ಕೆರೆಗಳಿಗೆ ನೀರು ಬಂತು!]

ಇದಾದ ನಂತರ ಒಂದು ವಾರದಲ್ಲೇ ಹಿಮವದ್ ಗೋಪಾಲಸ್ವಾಮಿ ಬೆಟ್ಟ ವ್ಯಾಪ್ತಿಯಲ್ಲಿ ಉತ್ತಮ ಮಳೆಬಿದ್ದಿತ್ತು. ಆ ನಂತರ ದೊಡ್ಡಕೆರೆಯಲ್ಲಿ ನೀರು ಉಕ್ಕಿಬರತೊಡಗಿತು. ಹೀಗಾಗಿ ನರೇಗಾ ಯೋಜನೆಯಡಿ ದುರಸ್ತಿ ಕಾರ್ಯವನ್ನು ಗ್ರಾಪಂ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದ್ದು ನೀರನ್ನು ಖಾಲಿ ಮಾಡಿ ಅಲ್ಲಿರುವ ಕಟ್ಟಡದ ಕಲ್ಲುಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ಹೂಳನ್ನು ಮೇಲೆತ್ತಲಾಗುತ್ತಿದೆ.
ಕೆರೆ ದುರಸ್ತಿಗೊಂಡು ಮುಂದಿನ ದಿನಗಳಲ್ಲಿ ಮಳೆ ಸುರಿದು ನೀರು ಸಂಗ್ರಹವಾಗಿದ್ದೇ ಆದರೆ ಗ್ರಾಮದ ನೀರಿನ ಬವಣೆ ಬಗೆಹರಿಸುವ ಸಾಧ್ಯತೆಯಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications