ಮೇ 16 ರಿಂದ ಬಂಡೀಪುರದಲ್ಲಿ ಆನೆಗಳ ಗಣತಿ
ಬಂಡೀಪುರ ಹುಲಿ ಯೋಜನೆಯಲ್ಲಿ ಮೇ 16 ರಿಂದ ಮೇ 19ರವರೆಗೆ ಆನೆ ಗಣತಿ ಕಾರ್ಯ ನಡೆಸಲು ಅರಣ್ಯ ಇಲಾಖೆಯು ಸಿದ್ಧತೆ ನಡೆಸಿದೆ ಎಂದು ಹುಲಿಯೋಜನೆಯ ನಿರ್ದೇಶಕ ಟಿ.ಹೀರಲಾಲ್ ತಿಳಿಸಿದ್ದಾರೆ.
ಚಾಮರಾಜನಗರ, ಮೇ 12: ಬಂಡೀಪುರ ಹುಲಿ ಯೋಜನೆಯಲ್ಲಿ ಮೇ 16 ರಿಂದ ಮೇ 19ರವರೆಗೆ ಆನೆ ಗಣತಿ ಕಾರ್ಯ ನಡೆಸಲು ಅರಣ್ಯ ಇಲಾಖೆಯು ಸಿದ್ಧತೆ ನಡೆಸಿದೆ ಎಂದು ಹುಲಿಯೋಜನೆಯ ನಿರ್ದೇಶಕ ಟಿ.ಹೀರಲಾಲ್ ತಿಳಿಸಿದ್ದಾರೆ.
ಮೇ 16ರಿಂದ ಪ್ರಾರಂಭವಾಗುವ ಗಣತಿಗೆ ರಾಜ್ಯದ ವಿವಿಧೆಡೆಗಳಿಂದ 130 ಸ್ವಯಂಸೇವಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. 113 ಬೀಟುಗಳನ್ನು ಇದಕ್ಕಾಗಿ ಗುರುತಿಸಲಾಗಿದ್ದು 100 ಸಿಬ್ಬಂದಿ ಗಣತಿಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ಬೀಟ್ ನ 5 ರಿಂದ 6 ಕಿ.ಮೀ. ವ್ಯಾಪ್ತಿಗೆ ಒಂದು ಬ್ಲಾಕ್ ಎಂದು ಗುರುತಿಸಿ ಗಣತಿ ಕಾರ್ಯ ನಡೆಯಲಿದೆ.

ಮೇ.16ರಂದು ಬಂಡೀಪುರ ಹುಲಿ ಯೋಜನೆಯ ಸ್ವಾಗತ ಕಚೇರಿಯಲ್ಲಿ ಸ್ವಯಂಸೇವಕರಿಗೆ ಸೂಕ್ತ ಸಲಹೆ ಸೂಚನೆ ನೀಡಿ ಅವರೊಂದಿಗೆ ಗಣತಿ ನಡೆಸುವ ಸಲುವಾಗಿ ಪೂರ್ವ ತಯಾರಿ ಹಾಗೂ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಎಲ್ಲಾ ಸ್ವಯಂಸೇವಕರು ರಾತ್ರಿ ವೇಳೆಯಲ್ಲಿ ಅವರು ಗಣತಿ ಮಾಡಲು ನೇಮಕವಾಗಿರುವ ವಲಯದ ಕಳ್ಳಬೇಟೆ ನಿಗ್ರಹದಳದ ಶಿಬಿರಗಳಲ್ಲಿ ಉಳಿಯ ಬೇಕಿದೆ.
ಮರುದಿನ ಮೇ.17ರಂದು ಮುಂಜಾನೆ 6.30ರಿಂದ ಮಧ್ಯಾಹ್ನ 3.30ರವರೆಗೆ ನಡೆಯುವ ಗಣತಿಯಲ್ಲಿ ಪ್ರತಿ ಬ್ಲಾಕ್ ನಲ್ಲಿಯೂ ಅರಣ್ಯ ಸಿಬ್ಬಂದಿ ಹಾಗೂ ಸ್ವಯಂಸೇವಕರು ತಮಗೆ ಎದುರಾಗುವ ಆನೆಗಳನ್ನು ಲಿಂಗ ಹಾಗೂ ವಯಸ್ಸಿನ ಆಧಾರದ ಮೇಲೆ ದಾಖಲಿಸಿಕೊಳ್ಳುತ್ತಾರೆ.
ಮೇ.18ರಂದು ಆನೆಗಳ ಲದ್ದಿಯನ್ನು ಗುರುತಿಸುವ ಮೂಲಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಮೇ.19ರಂದು ಕೆರೆ ಕಟ್ಟೆ ಹಾಗೂ ನೀರಿನ ಮೂಲಗಳ ಬಳಿ ಕಾದು ನೀರು ಕುಡಿಯಲು ಬರುವ ಆನೆಗಳನ್ನು ಗಣತಿ ಮಾಡಲಾಗುತ್ತದೆ. 20ರಂದು ಮಾಹಿತಿಗಳನ್ನು ಗಣತಿ ಸಂದರ್ಭದಲ್ಲಿ ಯಾವುದಾದರೂ ವಿಷಯಗಳು ಕೈಬಿಟ್ಟಿದ್ದರೆ ಮತ್ತು ಸಮಸ್ಯೆಗಳು ಇದ್ದಲ್ಲಿ ಅವುಗಳನ್ನು ನಿವಾರಿಸಿ ಸ್ವಯಂ ಸೇವಕರಿಂದ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications